ಆಲಪ್ಪುಳ ದಂಪತಿ 
ದೇಶ

ಕೇರಳ: ಪ್ರವಾಹದ ನಡುವೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಜೋಡಿ; ಕಲ್ಯಾಣ ಮಂಟಪ ತಲುಪಿದ್ದೇ ರೋಚಕ!

ಕೇರಳದಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಜನ-ಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೇ ಪ್ರವಾಹ ಪರಿಸ್ಥಿತಿ ಕೂಡ ಇದ್ದು, ಇದರ ನಡುವೆ ಜೋಡಿಯೊಂದು ಮದುವೆ ಮುಂದೂಡದೆ ವಿಭಿನ್ನವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಆಲಪ್ಪುಳ: ಕೇರಳದಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಜನ-ಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೇ ಪ್ರವಾಹ ಪರಿಸ್ಥಿತಿ ಕೂಡ ಇದ್ದು, ಇದರ ನಡುವೆ ಜೋಡಿಯೊಂದು ಮದುವೆ ಮುಂದೂಡದೆ ವಿಭಿನ್ನವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ತಲವಾಡಿಯ ದೇವಸ್ಥಾನಕ್ಕೆ ಹೊಂದಿಕೊಂಡ ಕಲ್ಯಾಣಮಂಟಪದಲ್ಲಿ ಆಕಾಶ್​​ ಮತ್ತು ಐಶ್ವರ್ಯ ಮದುವೆಯಾಗಲು ನಿರ್ಧರಿಸಿದ್ದರು. ಆದ್ರೆ ಮಳೆಯಿಂದಾಗಿ ಕಲ್ಯಾಣಮಂಟಪ ಜಲಾವೃತವಾಗಿತ್ತು. ಹೀಗಾಗಿ ಅವರ ಪೋಷಕರು ವಧು-ವರನನ್ನು ಮದುವೆ ಮಂಟಪಕ್ಕೆ ಪ್ರವಾಹದ ನೀರಿನಲ್ಲಿ ದೊಡ್ಡದಾದ ಅಡುಗೆ ಪಾತ್ರೆಯಲ್ಲಿ ಕೂರಿಸಿ ಕರೆತಂದಿದ್ದಾರೆ. 

ದೊಡ್ಡ ಪಾತ್ರೆಯ ಮೂಲಕ ಕಲ್ಯಾಣ ಮಂಟಪಕ್ಕೆ ಬಂದ ಈ ಜೋಡಿ ಇಂದು ಕೆಲವೇ ಬಂಧು-ಮಿತ್ರರ ಸಮ್ಮುಖದಲ್ಲಿ ಮದುವೆಯಾಗಿದೆ. ಆಲಪ್ಪುಳ ಜಿಲ್ಲೆಯ ನಿವಾಸಿಗಳಾದ ಆಕಾಶ್ ಮತ್ತು ಐಶ್ವರ್ಯ ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು.ಈ ಇಬ್ಬರು ಚೆಂಗನೂರುವಿನಲ್ಲಿ ಆರೋಗ್ಯ ಸೇವೆ ಕಾರ್ಯಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT