ಆಲಪ್ಪುಳ ದಂಪತಿ 
ದೇಶ

ಕೇರಳ: ಪ್ರವಾಹದ ನಡುವೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಜೋಡಿ; ಕಲ್ಯಾಣ ಮಂಟಪ ತಲುಪಿದ್ದೇ ರೋಚಕ!

ಕೇರಳದಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಜನ-ಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೇ ಪ್ರವಾಹ ಪರಿಸ್ಥಿತಿ ಕೂಡ ಇದ್ದು, ಇದರ ನಡುವೆ ಜೋಡಿಯೊಂದು ಮದುವೆ ಮುಂದೂಡದೆ ವಿಭಿನ್ನವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಆಲಪ್ಪುಳ: ಕೇರಳದಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಜನ-ಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೇ ಪ್ರವಾಹ ಪರಿಸ್ಥಿತಿ ಕೂಡ ಇದ್ದು, ಇದರ ನಡುವೆ ಜೋಡಿಯೊಂದು ಮದುವೆ ಮುಂದೂಡದೆ ವಿಭಿನ್ನವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ತಲವಾಡಿಯ ದೇವಸ್ಥಾನಕ್ಕೆ ಹೊಂದಿಕೊಂಡ ಕಲ್ಯಾಣಮಂಟಪದಲ್ಲಿ ಆಕಾಶ್​​ ಮತ್ತು ಐಶ್ವರ್ಯ ಮದುವೆಯಾಗಲು ನಿರ್ಧರಿಸಿದ್ದರು. ಆದ್ರೆ ಮಳೆಯಿಂದಾಗಿ ಕಲ್ಯಾಣಮಂಟಪ ಜಲಾವೃತವಾಗಿತ್ತು. ಹೀಗಾಗಿ ಅವರ ಪೋಷಕರು ವಧು-ವರನನ್ನು ಮದುವೆ ಮಂಟಪಕ್ಕೆ ಪ್ರವಾಹದ ನೀರಿನಲ್ಲಿ ದೊಡ್ಡದಾದ ಅಡುಗೆ ಪಾತ್ರೆಯಲ್ಲಿ ಕೂರಿಸಿ ಕರೆತಂದಿದ್ದಾರೆ. 

ದೊಡ್ಡ ಪಾತ್ರೆಯ ಮೂಲಕ ಕಲ್ಯಾಣ ಮಂಟಪಕ್ಕೆ ಬಂದ ಈ ಜೋಡಿ ಇಂದು ಕೆಲವೇ ಬಂಧು-ಮಿತ್ರರ ಸಮ್ಮುಖದಲ್ಲಿ ಮದುವೆಯಾಗಿದೆ. ಆಲಪ್ಪುಳ ಜಿಲ್ಲೆಯ ನಿವಾಸಿಗಳಾದ ಆಕಾಶ್ ಮತ್ತು ಐಶ್ವರ್ಯ ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು.ಈ ಇಬ್ಬರು ಚೆಂಗನೂರುವಿನಲ್ಲಿ ಆರೋಗ್ಯ ಸೇವೆ ಕಾರ್ಯಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು ಮತ್ತು ಬಂಗಾಳ ಸೇರಿದಂತೆ 5 ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ!

ಮಗುವಿನ ಪೋಷಣೆಗಾಗಿ ನಾನು ಯಾರ ಜೊತೆಗಾದರೂ ಮಲಗುತ್ತೇನೆ: ದೆಹಲಿಯ 'ವಡಾ ಪಾವ್ ಗರ್ಲ್' ಖ್ಯಾತಿಯ ಚಂದ್ರಿಕಾ ದೀಕ್ಷಿತ್

ಅಮೆರಿಕ ಹೊಡೆದಿದ್ದು ಇರಾನ್ ನ ಖಾರ್ಗ್ ಗೆ; ಪೆಟ್ಟು ಚೀನಾಗೆ!; ಅಡಕತ್ತರಿಯಲ್ಲಿ ಬೀಜಿಂಗ್!, ಇಂಧನಕ್ಕೆ ಹಾಹಾಕಾರ!

ಮಹಿಳೆಯರ ಬಗ್ಗೆ ಅಶ್ಲೀಲ ಸಾಹಿತ್ಯ: ಗನ್ ಪಾಯಿಂಟ್ ನಲ್ಲಿ ಕೊಲ್ತೀವಿ; ಸಿಂಗರ್ ಬಾದ್‌ಶಾಗೆ ಬೆದರಿಕೆ ಹಾಕಿದ ಬಿಷ್ಣೋಯ್ ಗ್ಯಾಂಗ್!

ತಮಿಳುನಾಡಿನಲ್ಲಿ ಬದಲಾದ ರಾಜಕೀಯ ಸಮೀಕರಣ; ಬಿಜೆಪಿ ಪಾಳಯಕ್ಕೆ TVK ವಿಜಯ್?: ಡಿಸಿಎಂ ಹುದ್ದೆ ಆಫರ್!

SCROLL FOR NEXT