ಪ್ರಿಯಾಂಕಾ ಗಾಂಧಿ 
ದೇಶ

ಹವಾಯಿ ಚಪ್ಪಲಿ ಧರಿಸಿರುವವರು ವಿಮಾನದಲ್ಲಿ ಪ್ರಯಾಣಿಸುವುದಿರಲಿ, ಜನ ರಸ್ತೆಯಲ್ಲಿ ಸಂಚರಿಸುವುದು ದುಸ್ತರವಾಗಿದೆ!

ಇಂಧನ ದರ ದರ ತೀವ್ರ ಏರಿಕೆಯಿಂದಾಗಿ ಮಧ್ಯಮವರ್ಗದ ಜನರು ರಸ್ತೆಯಲ್ಲಿ ಸಂಚರಿಸುವುದು ದುಸ್ತರವಾಗಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಟೀಕಿಸಿದ್ದಾರೆ. 

ನವದೆಹಲಿ : ಇಂಧನ ದರ ದರ ತೀವ್ರ ಏರಿಕೆಯಿಂದಾಗಿ ಮಧ್ಯಮವರ್ಗದ ಜನರು ರಸ್ತೆಯಲ್ಲಿ ಸಂಚರಿಸುವುದು ದುಸ್ತರವಾಗಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಟೀಕಿಸಿದ್ದಾರೆ. 

ಪೆಟ್ರೋಲ್, ಡೀಸೆಲ್‌ ದರ ಏರಿಕೆಯ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ,  ಹವಾಯಿ ಚಪ್ಪಲಿಯನ್ನು ಧರಿಸಿರುವವರೂ ವಿಮಾನದಲ್ಲಿ ಪ್ರಯಾಣಿಸುವಂತೆ ಮಾಡುವ ಭರವಸೆಯನ್ನು ನೀಡಲಾಗಿತ್ತು. ಆದರೆ, ಈಗ ಮಧ್ಯಮವರ್ಗದ ಜನರಿಗೂ ರಸ್ತೆಯಲ್ಲಿ ಚಲಿಸಲಾಗದ ಸ್ಥಿತಿಯನ್ನು ತರಲಾಗಿದೆ ಎಂದು ಟೀಕಿಸಿದ್ದಾರೆ. ವಿಮಾನಗಳಿಗೆ ಬಳಸುವ ಎಟಿಎಫ್‌ ತೈಲದ ದರಕ್ಕಿಂತಲೂ ಪೆಟ್ರೋಲ್, ಡೀಸೆಲ್‌ ದರ ಈಗ ಮೂರು ಪಟ್ಟು ಹೆಚ್ಚಾಗಿದೆ ಎಂದು ವಾಗ್ದಾಳಿ
ನಡೆಸಿದ್ದಾರೆ.

ಬಿಜೆಪಿ ಭರವಸೆ ಕುರಿತಂತೆ ಮಾಧ್ಯಮ ವರದಿಯ ಜೊತೆಗೆ ಟ್ವೀಟ್ ಮಾಡಿರುವ ಅವರು, ‘ಬಿಜೆಪಿಯು ದುಬಾರಿ ದಿನಗಳನ್ನು ತಂದಿಟ್ಟಿದೆ’ ಎಂದು ವ್ಯಂಗ್ಯಮಾಡಿದ್ದಾರೆ. ಪೆಟ್ರೋಲ್‌, ಡೀಸೆಲ್‌  ದರವನ್ನು ಭಾನುವಾರ ಲೀಟರಿಗೆ 35 ಪೈಸೆ ಏರಿಸಲಾಗಿತ್ತು. ಇದರ ಪರಿಣಾಮ, ದ್ವಿಚಕ್ರ ವಾಹನ ಮತ್ತು ಕಾರುಗಳಿಗೆ ಬಳಸುವ ಪೆಟ್ರೋಲ್‌ದರವು, ವಿಮಾನಗಳಿಗೆ ಬಳಸುವ ಎಟಿಎಫ್‌ ತೈಲಕ್ಕಿಂತಲೂ ಶೇ 33ರಷ್ಟು ಅಧಿಕವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ