ಪ್ರಿಯಾಂಕಾ ಗಾಂಧಿ 
ದೇಶ

ಹವಾಯಿ ಚಪ್ಪಲಿ ಧರಿಸಿರುವವರು ವಿಮಾನದಲ್ಲಿ ಪ್ರಯಾಣಿಸುವುದಿರಲಿ, ಜನ ರಸ್ತೆಯಲ್ಲಿ ಸಂಚರಿಸುವುದು ದುಸ್ತರವಾಗಿದೆ!

ಇಂಧನ ದರ ದರ ತೀವ್ರ ಏರಿಕೆಯಿಂದಾಗಿ ಮಧ್ಯಮವರ್ಗದ ಜನರು ರಸ್ತೆಯಲ್ಲಿ ಸಂಚರಿಸುವುದು ದುಸ್ತರವಾಗಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಟೀಕಿಸಿದ್ದಾರೆ. 

ನವದೆಹಲಿ : ಇಂಧನ ದರ ದರ ತೀವ್ರ ಏರಿಕೆಯಿಂದಾಗಿ ಮಧ್ಯಮವರ್ಗದ ಜನರು ರಸ್ತೆಯಲ್ಲಿ ಸಂಚರಿಸುವುದು ದುಸ್ತರವಾಗಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಟೀಕಿಸಿದ್ದಾರೆ. 

ಪೆಟ್ರೋಲ್, ಡೀಸೆಲ್‌ ದರ ಏರಿಕೆಯ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ,  ಹವಾಯಿ ಚಪ್ಪಲಿಯನ್ನು ಧರಿಸಿರುವವರೂ ವಿಮಾನದಲ್ಲಿ ಪ್ರಯಾಣಿಸುವಂತೆ ಮಾಡುವ ಭರವಸೆಯನ್ನು ನೀಡಲಾಗಿತ್ತು. ಆದರೆ, ಈಗ ಮಧ್ಯಮವರ್ಗದ ಜನರಿಗೂ ರಸ್ತೆಯಲ್ಲಿ ಚಲಿಸಲಾಗದ ಸ್ಥಿತಿಯನ್ನು ತರಲಾಗಿದೆ ಎಂದು ಟೀಕಿಸಿದ್ದಾರೆ. ವಿಮಾನಗಳಿಗೆ ಬಳಸುವ ಎಟಿಎಫ್‌ ತೈಲದ ದರಕ್ಕಿಂತಲೂ ಪೆಟ್ರೋಲ್, ಡೀಸೆಲ್‌ ದರ ಈಗ ಮೂರು ಪಟ್ಟು ಹೆಚ್ಚಾಗಿದೆ ಎಂದು ವಾಗ್ದಾಳಿ
ನಡೆಸಿದ್ದಾರೆ.

ಬಿಜೆಪಿ ಭರವಸೆ ಕುರಿತಂತೆ ಮಾಧ್ಯಮ ವರದಿಯ ಜೊತೆಗೆ ಟ್ವೀಟ್ ಮಾಡಿರುವ ಅವರು, ‘ಬಿಜೆಪಿಯು ದುಬಾರಿ ದಿನಗಳನ್ನು ತಂದಿಟ್ಟಿದೆ’ ಎಂದು ವ್ಯಂಗ್ಯಮಾಡಿದ್ದಾರೆ. ಪೆಟ್ರೋಲ್‌, ಡೀಸೆಲ್‌  ದರವನ್ನು ಭಾನುವಾರ ಲೀಟರಿಗೆ 35 ಪೈಸೆ ಏರಿಸಲಾಗಿತ್ತು. ಇದರ ಪರಿಣಾಮ, ದ್ವಿಚಕ್ರ ವಾಹನ ಮತ್ತು ಕಾರುಗಳಿಗೆ ಬಳಸುವ ಪೆಟ್ರೋಲ್‌ದರವು, ವಿಮಾನಗಳಿಗೆ ಬಳಸುವ ಎಟಿಎಫ್‌ ತೈಲಕ್ಕಿಂತಲೂ ಶೇ 33ರಷ್ಟು ಅಧಿಕವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT