ಎಸ್ ಜೈಶಂಕರ್ 
ದೇಶ

ಭಾರತದಲ್ಲಿನ ಅವಕಾಶಗಳನ್ನು ಬಳಸಿಕೊಳ್ಳಲು ಇಸ್ರೇಲಿ ಉದ್ಯಮಪತಿಗಳಿಗೆ ವಿದೇಶಾಂಗ ಸಚಿವ ಜೈಶಂಕರ್ ಕರೆ

ಮಾತುಕತೆ ವೇಳೆ ಭಾರತ ಸರ್ಕಾರದ ನೂತನ ಕೃಷಿ ಸುಧಾರಣಾ ಕಾನೂನಿನಿಂದ ಭವಿಷ್ಯದಲ್ಲಿ ಕೃಷಿ ಮತ್ತು ಆಹಾರ ಉತ್ಪಾದನೆ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಸೃಷ್ಟಿಯಾಗಲಿದೆ ಎಂದ ಜೈಶಂಕರ್.

ಜೆರುಸಲೆಂ: ವ್ಯಾಪಾರ ಮಾತುಕತೆ ಸಂಬಂಧ ಇಸ್ರೇಲ್ ಗೆ ಭೇಟಿ ನೀಡಿರುವ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಭಾರತದ ಅತ್ಯಂತ ವಿಶ್ವಾಸಪಾತ್ರ ದೇಶ ಇಸ್ರೇಲ್ ಎಂದು ಬಣ್ಣಿಸಿದ್ದಾರೆ. ಭಾರತದಲ್ಲಿ ಉದ್ಯಮ ಸ್ನೇಹ ವಾತಾವರಣವಿದ್ದು ಅದನ್ನು ಇಸ್ರೇಲಿ ಉದ್ಯಮಪತಿಗಳು ಬಳಸಿಕೊಳ್ಳಬೇಕಾಗಿ ಅವರು ಕರೆ ನೀಡಿದ್ದಾರೆ. 

ಇದೇ ವೇಳೆ ಅವರು ನೀಡಿದ ಭಾಷಣದಲ್ಲಿ ಜೈಶಂಕರ್ ಅವರು ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿದ ದಿನದಿಂದಲೂ ದೇಶದಲ್ಲಿ ತುಂಬಾ ಬದಲಾವಣೆಗಳಾಗಿವೆ, ಜನರು ಆ ಕುರಿತಾಗಿ ಸ್ವಲ್ಪ ಸ್ವಲ್ಪವೇ ತಿಳಿದುಕೊಂಡಿದ್ದಾರೆ ಎಂದರು.

ಇವೆಲ್ಲಾ ವಿಚಾರಗಳಿಂದ ದೇಶ ಪ್ರಗತಿಯತ್ತ ಮುಂದಡಿ ಇಟ್ಟಿದೆಯೆಂಬುದು ಯಾರಿಗೇ ಆದರೂ ಅರ್ಥವಾಗುತ್ತದೆ ಎಂದು ಜೈಶಂಕರ್ ಹೇಳಿದ್ದಾರೆ. ಅವರು ಪ್ರಮುಖವಾಗಿ ಇಸ್ರೇಲಿನ ಭದ್ರತಾ ಕ್ಷೇತ್ರದ ಸಂಸ್ಥೆಗಳನ್ನು ಭಾರತದಲ್ಲಿ ಹೂಡಿಕೆ ನಡೆಸಲು ಆಹ್ವಾನಿಸಿದ್ದಾರೆ.

ಮಾತುಕತೆ ವೇಳೆ ಭಾರತ ಸರ್ಕಾರದ ನೂತನ ಕೃಷಿ ಸುಧಾರಣಾ ಕಾನೂನಿನಿಂದ ಭವಿಷ್ಯದಲ್ಲಿ ಕೃಷಿ ಮತ್ತು ಆಹಾರ ಉತ್ಪಾದನೆ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಸೃಷ್ಟಿಯಾಗಲಿದೆ ಎಂದು ಜೈಶಂಕರ್ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

SCROLL FOR NEXT