ಎಸ್ ಜೈಶಂಕರ್ 
ದೇಶ

ಭಾರತದಲ್ಲಿನ ಅವಕಾಶಗಳನ್ನು ಬಳಸಿಕೊಳ್ಳಲು ಇಸ್ರೇಲಿ ಉದ್ಯಮಪತಿಗಳಿಗೆ ವಿದೇಶಾಂಗ ಸಚಿವ ಜೈಶಂಕರ್ ಕರೆ

ಮಾತುಕತೆ ವೇಳೆ ಭಾರತ ಸರ್ಕಾರದ ನೂತನ ಕೃಷಿ ಸುಧಾರಣಾ ಕಾನೂನಿನಿಂದ ಭವಿಷ್ಯದಲ್ಲಿ ಕೃಷಿ ಮತ್ತು ಆಹಾರ ಉತ್ಪಾದನೆ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಸೃಷ್ಟಿಯಾಗಲಿದೆ ಎಂದ ಜೈಶಂಕರ್.

ಜೆರುಸಲೆಂ: ವ್ಯಾಪಾರ ಮಾತುಕತೆ ಸಂಬಂಧ ಇಸ್ರೇಲ್ ಗೆ ಭೇಟಿ ನೀಡಿರುವ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಭಾರತದ ಅತ್ಯಂತ ವಿಶ್ವಾಸಪಾತ್ರ ದೇಶ ಇಸ್ರೇಲ್ ಎಂದು ಬಣ್ಣಿಸಿದ್ದಾರೆ. ಭಾರತದಲ್ಲಿ ಉದ್ಯಮ ಸ್ನೇಹ ವಾತಾವರಣವಿದ್ದು ಅದನ್ನು ಇಸ್ರೇಲಿ ಉದ್ಯಮಪತಿಗಳು ಬಳಸಿಕೊಳ್ಳಬೇಕಾಗಿ ಅವರು ಕರೆ ನೀಡಿದ್ದಾರೆ. 

ಇದೇ ವೇಳೆ ಅವರು ನೀಡಿದ ಭಾಷಣದಲ್ಲಿ ಜೈಶಂಕರ್ ಅವರು ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿದ ದಿನದಿಂದಲೂ ದೇಶದಲ್ಲಿ ತುಂಬಾ ಬದಲಾವಣೆಗಳಾಗಿವೆ, ಜನರು ಆ ಕುರಿತಾಗಿ ಸ್ವಲ್ಪ ಸ್ವಲ್ಪವೇ ತಿಳಿದುಕೊಂಡಿದ್ದಾರೆ ಎಂದರು.

ಇವೆಲ್ಲಾ ವಿಚಾರಗಳಿಂದ ದೇಶ ಪ್ರಗತಿಯತ್ತ ಮುಂದಡಿ ಇಟ್ಟಿದೆಯೆಂಬುದು ಯಾರಿಗೇ ಆದರೂ ಅರ್ಥವಾಗುತ್ತದೆ ಎಂದು ಜೈಶಂಕರ್ ಹೇಳಿದ್ದಾರೆ. ಅವರು ಪ್ರಮುಖವಾಗಿ ಇಸ್ರೇಲಿನ ಭದ್ರತಾ ಕ್ಷೇತ್ರದ ಸಂಸ್ಥೆಗಳನ್ನು ಭಾರತದಲ್ಲಿ ಹೂಡಿಕೆ ನಡೆಸಲು ಆಹ್ವಾನಿಸಿದ್ದಾರೆ.

ಮಾತುಕತೆ ವೇಳೆ ಭಾರತ ಸರ್ಕಾರದ ನೂತನ ಕೃಷಿ ಸುಧಾರಣಾ ಕಾನೂನಿನಿಂದ ಭವಿಷ್ಯದಲ್ಲಿ ಕೃಷಿ ಮತ್ತು ಆಹಾರ ಉತ್ಪಾದನೆ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಸೃಷ್ಟಿಯಾಗಲಿದೆ ಎಂದು ಜೈಶಂಕರ್ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT