ಪ್ರಿಯಾಂಕಾ ಗಾಂಧಿ 
ದೇಶ

ಕೋರ್ಟ್ ಆವರಣದಲ್ಲೇ ವಕೀಲರ ಹತ್ಯೆ: ಉತ್ತರ ಪ್ರದೇಶದಲ್ಲಿ ಯಾರೂ ಸುರಕ್ಷಿತವಲ್ಲ ಎಂದ ಪ್ರಿಯಾಂಕಾ ಗಾಂಧಿ

ರಾಜ್ಯದ ಶಹಜಹಾನ್ ಪುರ ಸಿವಿಲ್ ಕೋರ್ಟ್ ಆವರಣದಲ್ಲಿ ವಕೀಲರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಬೆನ್ನಲ್ಲೇ, ಉತ್ತರ ಪ್ರದೇಶದಲ್ಲಿ ಯಾರೂ ಸುರಕ್ಷಿತವಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರ ಹೇಳಿದ್ದಾರೆ.

ಶಹಜಹಾನ್ ಪುರ: ರಾಜ್ಯದ ಶಹಜಹಾನ್ ಪುರ ಸಿವಿಲ್ ಕೋರ್ಟ್ ಆವರಣದಲ್ಲಿ ವಕೀಲರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಬೆನ್ನಲ್ಲೇ, ಉತ್ತರ ಪ್ರದೇಶದಲ್ಲಿ ಯಾರೂ ಸುರಕ್ಷಿತವಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರ ಹೇಳಿದ್ದಾರೆ.

"ಕಾನೂನು ಮತ್ತು ನ್ಯಾಯಾಂಗ ನಮ್ಮ ಪ್ರಜಾಪ್ರಭುತ್ವದ ಅವಿಭಾಜ್ಯ ಆಧಾರ ಸ್ತಂಭವಾಗಿದೆ. ಶಹಜಹಾನ್ಪುರದ ನ್ಯಾಯಾಲಯದ ಆವರಣದಲ್ಲಿ ಹಗಲು ಹೊತ್ತಿನಲ್ಲಿ ವಕೀಲರ ಬರ್ಬರ ಹತ್ಯೆಯಾಗಿದೆ. ಇಂದಿನ ಉತ್ತರ ಪ್ರದೇಶದಲ್ಲಿ, ಮಹಿಳೆಯರು, ರೈತರು ಹಾಗೂ ವಕೀಲರು ಸೇರಿದಂತೆ ಯಾರೂ ಸುರಕ್ಷಿತವಾಗಿಲ್ಲ ಎನ್ನುವುದನ್ನು ನೆನಪಿಸುತ್ತದೆ" ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್ ಮೂಲಕ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಗೂಂಡಾಗಳು ಮತ್ತು ದುಷ್ಕರ್ಮಿಗಳು ರಾಜ್ಯದಿಂದ ಪಲಾಯನ ಮಾಡಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿಗಳು ಹೇಳುತ್ತಿದ್ದರು. ಆದರೆ ಇಲ್ಲಿ ಅವರು ನ್ಯಾಯಾಲಯಕ್ಕೆ ನುಗ್ಗಿ ವಕೀಲರನ್ನು ಕೊಲ್ಲುತ್ತಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

"ಬಿಜೆಪಿ ಆಡಳಿತದಲ್ಲಿ ಯಾವುದೇ ಸಾಮಾನ್ಯ ವ್ಯಕ್ತಿಯೂ ಸುರಕ್ಷಿತವಾಗಿಲ್ಲ ಎಂದು ಷಹಜಹಾನ್ ಪುರ್ ಘಟನೆಯು ಮತ್ತೊಮ್ಮೆ ಸಾಬೀತುಪಡಿಸಿದೆ. ಆದರೆ ರಾಜ್ಯ ಸರ್ಕಾರ ಕಾನೂನು ಮತ್ತು ಸುವ್ಯವಸ್ಥೆಯನ್ನು ಸುಧಾರಿಸುವ ಬದಲು ಸುಳ್ಳುಗಳನ್ನು ಹರಡುತ್ತಿದೆ" ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!