ಪ್ರಿಯಾಂಕಾ ಗಾಂಧಿ 
ದೇಶ

ಕೋರ್ಟ್ ಆವರಣದಲ್ಲೇ ವಕೀಲರ ಹತ್ಯೆ: ಉತ್ತರ ಪ್ರದೇಶದಲ್ಲಿ ಯಾರೂ ಸುರಕ್ಷಿತವಲ್ಲ ಎಂದ ಪ್ರಿಯಾಂಕಾ ಗಾಂಧಿ

ರಾಜ್ಯದ ಶಹಜಹಾನ್ ಪುರ ಸಿವಿಲ್ ಕೋರ್ಟ್ ಆವರಣದಲ್ಲಿ ವಕೀಲರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಬೆನ್ನಲ್ಲೇ, ಉತ್ತರ ಪ್ರದೇಶದಲ್ಲಿ ಯಾರೂ ಸುರಕ್ಷಿತವಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರ ಹೇಳಿದ್ದಾರೆ.

ಶಹಜಹಾನ್ ಪುರ: ರಾಜ್ಯದ ಶಹಜಹಾನ್ ಪುರ ಸಿವಿಲ್ ಕೋರ್ಟ್ ಆವರಣದಲ್ಲಿ ವಕೀಲರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಬೆನ್ನಲ್ಲೇ, ಉತ್ತರ ಪ್ರದೇಶದಲ್ಲಿ ಯಾರೂ ಸುರಕ್ಷಿತವಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರ ಹೇಳಿದ್ದಾರೆ.

"ಕಾನೂನು ಮತ್ತು ನ್ಯಾಯಾಂಗ ನಮ್ಮ ಪ್ರಜಾಪ್ರಭುತ್ವದ ಅವಿಭಾಜ್ಯ ಆಧಾರ ಸ್ತಂಭವಾಗಿದೆ. ಶಹಜಹಾನ್ಪುರದ ನ್ಯಾಯಾಲಯದ ಆವರಣದಲ್ಲಿ ಹಗಲು ಹೊತ್ತಿನಲ್ಲಿ ವಕೀಲರ ಬರ್ಬರ ಹತ್ಯೆಯಾಗಿದೆ. ಇಂದಿನ ಉತ್ತರ ಪ್ರದೇಶದಲ್ಲಿ, ಮಹಿಳೆಯರು, ರೈತರು ಹಾಗೂ ವಕೀಲರು ಸೇರಿದಂತೆ ಯಾರೂ ಸುರಕ್ಷಿತವಾಗಿಲ್ಲ ಎನ್ನುವುದನ್ನು ನೆನಪಿಸುತ್ತದೆ" ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್ ಮೂಲಕ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಗೂಂಡಾಗಳು ಮತ್ತು ದುಷ್ಕರ್ಮಿಗಳು ರಾಜ್ಯದಿಂದ ಪಲಾಯನ ಮಾಡಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿಗಳು ಹೇಳುತ್ತಿದ್ದರು. ಆದರೆ ಇಲ್ಲಿ ಅವರು ನ್ಯಾಯಾಲಯಕ್ಕೆ ನುಗ್ಗಿ ವಕೀಲರನ್ನು ಕೊಲ್ಲುತ್ತಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

"ಬಿಜೆಪಿ ಆಡಳಿತದಲ್ಲಿ ಯಾವುದೇ ಸಾಮಾನ್ಯ ವ್ಯಕ್ತಿಯೂ ಸುರಕ್ಷಿತವಾಗಿಲ್ಲ ಎಂದು ಷಹಜಹಾನ್ ಪುರ್ ಘಟನೆಯು ಮತ್ತೊಮ್ಮೆ ಸಾಬೀತುಪಡಿಸಿದೆ. ಆದರೆ ರಾಜ್ಯ ಸರ್ಕಾರ ಕಾನೂನು ಮತ್ತು ಸುವ್ಯವಸ್ಥೆಯನ್ನು ಸುಧಾರಿಸುವ ಬದಲು ಸುಳ್ಳುಗಳನ್ನು ಹರಡುತ್ತಿದೆ" ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT