ಎನ್ ಡಿಆರ್ ಎಫ್ ತಂಡದಿಂದ ರಕ್ಷಣಾ ಕಾರ್ಯಾಚರಣೆ 
ದೇಶ

ಉತ್ತರಾಖಂಡದಲ್ಲಿ ವರುಣನ ಅಬ್ಬರಕ್ಕೆ 34 ಮಂದಿ ಬಲಿ, ನೈನಿತಾಲದಲ್ಲಿ ಗರಿಷ್ಠ ಸಾವು

ಉತ್ತರಾಖಂಡದಲ್ಲಿ ಕಳೆದ ಮೂರು ದಿನಗಳಿಂದ ಭಾರಿ ವರ್ಷಧಾರೆಯಾಗುತ್ತಿದ್ದು, ನೈನಿತಾಲ್ ಹಾಗೂ ಅಲ್ಮೋರಾದಲ್ಲಿ ಮಳೆಸಂಬಂಧಿ ಅವಘಡಗಳಿಗೆ ಸಿಲುಕಿ 34 ಮಂದಿ ಮೃತಪಟ್ಟಿದ್ದಾರೆ. 

ನೈನಿತಾಲ್: ಉತ್ತರಾಖಂಡದಲ್ಲಿ ಕಳೆದ ಮೂರು ದಿನಗಳಿಂದ ಭಾರಿ ವರ್ಷಧಾರೆಯಾಗುತ್ತಿದ್ದು, ನೈನಿತಾಲ್ ಹಾಗೂ ಅಲ್ಮೋರಾದಲ್ಲಿ ಮಳೆಸಂಬಂಧಿ ಅವಘಡಗಳಿಗೆ ಸಿಲುಕಿ 34 ಮಂದಿ ಮೃತಪಟ್ಟಿದ್ದಾರೆ. 

ಮಳೆ ಸಂಬಂಧಿತ ಘಟನೆಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 34ಕ್ಕೆ ತಲುಪಿದ್ದು, ಐವರು ಇನ್ನೂ ನಾಪತ್ತೆಯಾಗಿದ್ದಾರೆ. ಮೃತರ ಸಂಬಂಧಿಕರಿಗೆ ನಾಲ್ಕು ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಘೋಷಿಸಿದ್ದಾರೆ.

ಮಳೆಯಿಂದಾಗಿ ಮನೆ ಕಳೆದುಕೊಂಡವರಿಗೆ 1.9 ಲಕ್ಷ ರೂಪಾಯಿ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ರಾಜ್ಯದಲ್ಲಿನ ಮಳೆ ಪರಿಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಾಹಿತಿ ಪಡೆದಿದ್ದು, ಅಗತ್ಯ ನೆರವು ನೀಡುವ ಭರವಸೆ ನೀಡಿದ್ದಾರೆ. ರಾಜ್ಯ ಸರ್ಕಾರ ಸಹ ಪರಿಸ್ಥಿತಿಯನ್ನು ನಿಭಾಯಿಸಲಿದೆ ಎಂಬ ಆಶ್ವಾಸನೆ ನೀಡಿದ್ದೇನೆ. ಮೂರು ಹೆಲಿಕಾಫ್ಟರ್ ಗಳ ನೆರವು ನೀಡುವಂತೆ ಭಾರತೀಯ ಸೇನೆಯನ್ನು ಕೇಳಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಭಾರೀ ಮಳೆಯಿಂದಾಗಿ ಹಲವು ಸೇತುವೆಗಳು ಮತ್ತು ಮನೆಗಳು ಕುಸಿದಿವೆ. ಭೂಕುಸಿತದಲ್ಲಿ ಹಲವರು ಸಮಾಧಿಯಾಗಿದ್ದು, ಅನೇಕ ಜನರು ಕಾಣೆಯಾಗಿದ್ದಾರೆ. ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ನೈನಿತಾಲ್ ಅತಿ ಹೆಚ್ಚು ಜನ ಮೃತಪಟ್ಟಿದ್ದಾರೆ. ಮಳೆಯಿಂದಾಗಿ ನೈನಿತಾಲ್ ಹಾಗೂ ಅಲ್ಮೋರಾ ಜಿಲ್ಲೆಗಳು ಹೆಚ್ಚು ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಲು ಎನ್ ಡಿಆರ್ ಎಫ್ 15 ರಕ್ಷಣಾ ತಂಡಗಳನ್ನು ನಿಯೋಜಿಸಿದೆ. ರಕ್ಷಣಾ ತಂಡಗಳು ಉಧಮ್ ಸಿಂಗ್ ನಗರ ಜಿಲ್ಲೆ ಮತ್ತು ಇತರ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ 300 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT