ಕ್ಯಾಪ್ಟನ್ ಅಮರೀಂದರ್ ಸಿಂಗ್ 
ದೇಶ

ಪಂಜಾಬ್ ಮಾಜಿ ಸಿಎಂ ಅಮರೀಂದರ್ ಸಿಂಗ್ ರಿಂದ ಶೀಘ್ರದಲ್ಲೇ ಹೊಸ ಪಕ್ಷ ಘೋಷಣೆ, ಬಿಜೆಪಿ ಜತೆ ಮೈತ್ರಿ ಸಾಧ್ಯತೆ

ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಶೀಘ್ರದಲ್ಲೇ ತಮ್ಮದೇ ಆದ ರಾಜಕೀಯ ಪಕ್ಷವನ್ನು ಕಟ್ಟುವುದಾಗಿ ಬಹಿರಂಗಪಡಿಸಿದ್ದಾರೆ. ಅಲ್ಲದೇ ಅವರು ಬಿಜೆಪಿ ಜೊತೆ ಚುನಾವಣಾ ಪೂರ್ವ ಮೈತ್ರಿ....

ನವದೆಹಲಿ: ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಶೀಘ್ರದಲ್ಲೇ ತಮ್ಮದೇ ಆದ ರಾಜಕೀಯ ಪಕ್ಷವನ್ನು ಕಟ್ಟುವುದಾಗಿ ಬಹಿರಂಗಪಡಿಸಿದ್ದಾರೆ. ಅಲ್ಲದೇ ಅವರು ಬಿಜೆಪಿ ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯೂ ಇದೆ. 

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ದೀರ್ಘಕಾಲದ ಆಂದೋಲನವು ಶೀಘ್ರದಲ್ಲೇ ಮುಗಿಯಲಿದೆ ಎಂದು ಪಂಜಾಬ್ ಮಾಜಿ ಸಿಎಂ ಸುಳಿವು ನೀಡಿದ್ದಾರೆ.

ಪಂಜಾಬ್​ನ ಉತ್ತಮ ಭವಿಷ್ಯಕ್ಕಾಗಿ ನಮ್ಮ ಹೋರಾಟ ಇನ್ನೂ ಮುಗಿದಿಲ್ಲ. ನನ್ನ ಹೊಸ ರಾಜಕೀಯ ಪಕ್ಷವನ್ನು ಶೀಘ್ರ ಘೋಷಿಸುತ್ತೇನೆ. ಪಂಜಾಬ್ ರಾಜ್ಯ ಮತ್ತು ಅದರ ಜನರ ಹಿತಾಸಕ್ತಿಗಳನ್ನು ಕಾಪಾಡುತ್ತೇನೆ. ಕಳೆದ ಒಂದು ವರ್ಷಗಳಿಂದ ಉಳಿವಿಗಾಗಿ ಹೋರಾಡುತ್ತಿರುವ ರೈತರ ಪರವಾಗಿ ನಿಲ್ಲುತ್ತೇನೆ ಎಂದು ಅಮರಿಂದರ್ ಸಿಂಗ್ ಹೇಳಿದ್ದಾರೆ.

ಕೇಂದ್ರ ಸರ್ಕಾರವು ರೈತ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದು, ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಅಮರೀಂದರ್ ಸಿಂಗ್ ಅವರ ನಿರ್ಧಾರವು ಕೃಷಿ ಕಾನೂನು ಸಮಸ್ಯೆಗೆ ನೀಡುವ ಪರಿಹಾರದ ಮೇಲೆ ಅವಲಂಬಿಸಿರುತ್ತದೆ ಎಂದು ತಿಳಿದುಬಂದಿದೆ.

ಅಮರೀಂದರ್ ಅವರು ಬಿಜೆಪಿಯನ್ನು ಹೊರತುಪಡಿಸಿ, ಶಿರೋಮಣಿ ಅಕಾಲಿದಳದ ವಿಘಟನೆಯ ಬಣದೊಂದಿಗೆ, ವಿಶೇಷವಾಗಿ ದಿಂಡಸ ಮತ್ತು ಬ್ರಹ್ಮಪುರ ಬಣದ ಜೊತೆಗೂ ಮೈತ್ರಿಯನ್ನು ಮಾಡಿಕೊಳ್ಳಲು ಚಿಂತಿಸುತ್ತಿದ್ದಾರೆ.

2022ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಸ್ಥಾನ ಹೊಂದಾಣಿಕೆ ಬಗ್ಗೆ ನಿರೀಕ್ಷೆ ಇರಿಸಿಕೊಂಡಿದ್ದೇನೆ. ರೈತರ ಹಿತಾಸಕ್ತಿಗೆ ಪೂರಕವಾಗಿ ರೈತ ಚಳವಳಿಯ ಆಶಯಗಳು ಈಡೇರಿದರೆ ಮಾತ್ರ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವೆ ಎಂದು ಅಮರೀಂದರ್ ಸಿಂಗ್ ಅವರ ಮಾಧ್ಯಮ ಕಾರ್ಯದರ್ಶಿ ರವೀನ್ ಥುಕ್ರಲ್ ಅವರು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!

ಜುಲೈ ಕಂಟಕ: ಕಳೆದ ವರ್ಷ ಹಠಾತ್ ಬಿರುಗಾಳಿಯಿಂದ ದೋಣಿ ಮಗುಚಿ 39 ಮಂದಿ ಸಾವು; ಈ ವರ್ಷ 15 ಮಂದಿ ದುರ್ಮರಣ!