ಫಲಕ ಉದ್ಘಾಟಿಸಿದ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ 
ದೇಶ

ಜೆರುಸಲೆಂನಲ್ಲಿ 12ನೇ ಶತಮಾನದ ಭಾರತೀಯ ಸೂಫಿ ಸಂತನ ಪವಿತ್ರ ಸ್ಥಳಕ್ಕೆ ಜೈಶಂಕರ್ ಭೇಟಿ

12ನೇ ಶತಮಾನದಲ್ಲಿ ಭಾರತದ ಸೂಫಿ ಸಂತ ಬಾಬಾ ಫರೀದ್ ಪವಿತ್ರ ನಗರಿ ಜೆರುಸಲೆಂಗೆ ಬಂದಿದ್ದ. ಆತ ಅಲ್ಲಿನ ಕಲ್ಲು ಬೆಂಚಿನ ಮೇಲೆ 40 ದಿನಗಳ ಕಾಲ ಧ್ಯಾನ ಮಾಡಿದ್ದ

ಜೆರುಸಲೆಂ: ಇಸ್ರೇಲ್ ಭೇಟಿ ಸಂದರ್ಭ ಭಾರತೀಯ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಜೆರುಸಲೆಂನಲ್ಲಿ ನೆಲೆಗೊಂಡ ಪ್ರಾಚೀನ ಭಾರತೀಯ ಚಿಕಿತ್ಸಾ ಕೇಂದ್ರಕ್ಕೆ ಭೇಟಿ ನೀಡಿದ್ದಾರೆ. 

ಆ ಚಿಕಿತ್ಸಾ ಕೇಂದ್ರದಲ್ಲಿ ಫಲಕವೊಂದನ್ನು ಜೈಶಂಕರ್ ಅವರು ಉದ್ಘಾಟಿಸಿದ್ದಾರೆ. ಅದರಲ್ಲಿ 12ನೇ ಶತಮಾನದಲ್ಲಿ ನಿರ್ಮಾಣಗೊಂಡ ಭಾರತೀಯ ಚಿಕಿತ್ಸಾ ಕೇಂದ್ರ, ಭಾರತ ವಿದೇಶಾಂಗ ಸಚಿವಾಲಯದಿಂದ ಅನುದಾನಿತ ಎಂದು ಬರೆಯಲಾಗಿದೆ. 

ಈ ಚಿಕಿತ್ಸಾ ಕೇಂದ್ರದ ಹಿನ್ನೆಲೆ ಬಹಳ ಸ್ವಾರಸ್ಯಕರವಾಗಿದೆ. 12ನೇ ಶತಮಾನದಲ್ಲಿ ಭಾರತದ ಸೂಫಿ ಸಂತನೊಬ್ಬ ಪವಿತ್ರ ನಗರಿ ಜೆರುಸಲಂಗೆ ಬಂದಿದ್ದ. ಆತನ ಹೆಸರು ಬಾಬಾ ಫರೀದ್.  ಆ ಸಂದರ್ಭದಲ್ಲಿ ಆತ ಅಲ್ಲಿನ ಕಲ್ಲು ಬೆಂಚಿನ ಮೇಲೆ 40 ದಿನಗಳ ಕಾಲ ಧ್ಯಾನ ಮಾಡಿದ್ದ ಎನ್ನುತ್ತಾರೆ. ಅಂದಿನಿಂದ ಮೆಕ್ಕಾಗೆ ಭೇಟಿ ನೀಡುವ ಭಾರತೀಯ ಭಕ್ತಾದಿಗಳು ಜೆರುಸಲೆಂನ ಈ ಸ್ಥಳಕ್ಕೆ ಬಂದು ಭೇಟಿ ನೀಡುವ ಪರಿಪಾಠ ಪ್ರಾರಂಭವಾಯಿತು. 

ಈ ಸ್ಥಳವೇ ಚಿಕಿತ್ಸಾ ಕೇಂದ್ರವಾಗಿ ಮಾರ್ಪಾಡಾಗಿದೆ. ಎಂಥ ಗಂಭೀರ ಆರೋಗ್ಯ ಸಮಸ್ಯೆಯಿದ್ದರೂ ಇಲ್ಲಿ ಪರಿಹಾರವಾಗುತ್ತದೆ ಎನ್ನುವ ನಂಬಿಕೆ ಭಕ್ತಾದಿಗಳದ್ದು. ಈ ಸ್ಥಳವನ್ನು ಭಾರತ ಸರ್ಕಾರ ೧೯೬೦ರಿಂದಲೂ ಪೋಷಿಸಿಕೊಂಡು ಬಂದಿದೆ. ವಿಶ್ವ ಮಹಾಯುದ್ಧ ಸಮಯದಲ್ಲಿ ಬ್ರಿಟಿಷ್ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಭಾರತೀಯ ಸೈನಿಕರು ಇಸ್ರೇಲಿಗೆ ಬಂದಾಗ ಈ ಸ್ಥಳದಲ್ಲಿಯೇ ಆಶ್ರಯ ಪಡೆದಿದ್ದರು ಎನ್ನುವುದು ವಿಶೇಷ.

ಬಾಬಾ ಫರೀದ್ ಸ್ಥಳಕ್ಕೆ ಭೇಟಿ ನೀಡಿದ ಜೈಶಂಕರ್ 'ಭಾರತ ಮತ್ತು ಇಸ್ರೇಲ್ ನಡುವಿನ ಸಂಬಂಧ ೧೨ನೇ ಶತಮಾನಕ್ಕೂ ಹಳೆಯದು ಎನ್ನುವುದರ ದ್ಯೋತಕ ಇದು' ಎಂದು ಬಣ್ಣಿಸಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT