ಸಾಂದರ್ಭಿಕ ಚಿತ್ರ 
ದೇಶ

ಗುಜರಾತ್: ಕಲ್ಲಿನ ಬದಲು ಕಿಡ್ನಿಯನ್ನೇ ಹೊರ ತೆಗೆದ ವೈದ್ಯ, ರೋಗಿ ಸಾವು

ಗುಜರಾತ್ ನ ಅಹಮದಾಬಾದ್ ನ ಗ್ರಾಹಕ ನ್ಯಾಯಾಲಯವು ಆಸ್ಪತ್ರೆಯೊಂದಕ್ಕೆ 11.23 ಲಕ್ಷ ರೂ.ಗಳನ್ನು ಮೃತ ರೋಗಿಯ ಕುಟುಂಬಸ್ಥರಿಗೆ ಪರಿಹಾರವಾಗಿ ನೀಡುವಂತೆ ಸೂಚಿಸಿದೆ.

ಅಹಮದಾಬಾದ್: ಗುಜರಾತ್ ನ ಅಹಮದಾಬಾದ್ ನ ಗ್ರಾಹಕ ನ್ಯಾಯಾಲಯವು ಆಸ್ಪತ್ರೆಯೊಂದಕ್ಕೆ 11.23 ಲಕ್ಷ ರೂ.ಗಳನ್ನು ಮೃತ ರೋಗಿಯ ಕುಟುಂಬಸ್ಥರಿಗೆ ಪರಿಹಾರವಾಗಿ ನೀಡುವಂತೆ ಸೂಚಿಸಿದೆ.

ಗುಜರಾತ್ ನ ಮಹಿಸಾಗರ್ ಜಿಲ್ಲೆಯ ಬಾಲಸಿನೋರ್ ನಲ್ಲಿರುವ ಕೆಎಂಜಿ ಜನರಲ್​ ಆಸ್ಪತ್ರೆಯ ವೈದ್ಯರ ನಿರ್ಲಕ್ಷದಿಂದ ರೋಗಿಯೊಬ್ಬ ಪ್ರಾಣವನ್ನು ಕಳೆದುಕೊಂಡಿದ್ದಾನೆ. 

ಕೆಎಂಜಿ ಜನರಲ್​ ಆಸ್ಪತ್ರೆಯಲ್ಲಿ ರೋಗಿಯೊಬ್ಬರಿಗೆ ಕಳೆದ ನಾಲ್ಕು ತಿಂಗಳಿನಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ವ್ಯಕ್ತಿಯ ಕಿಡ್ನಿಯಲ್ಲಿ ಸ್ಟೋನ್​ ಇದ್ದು, ಅದನ್ನು ತೆಗೆಯಲು ವೈದ್ಯರು ಶಸ್ತ್ರ ಚಿಕಿತ್ಸೆ ಮಾಡಲು ಮುಂದಾಗಿದ್ದಾರೆ. ಆದ್ರೆ ಶಸ್ತ್ರ ಚಿಕಿತ್ಸೆ ವೇಳೆ ಕಿಡ್ನಿಯಲ್ಲಿನ ಕಲ್ಲು ತೆಗೆಯುವ ಬದಲು ಕಿಡ್ನಿಯನ್ನೇ ತೆಗೆದಿದ್ದಾರೆ. ಇದರಿಂದ ರೋಗಿ ಮೃತಪಟ್ಟಿದ್ದಾನೆ.

ಡಾ. ಶಿವುಭಾಯಿ ಪಟೇಲ್​​ ನೇತೃತ್ವದ ತಂಡ ಅನೇಕ ವೈದ್ಯಕೀಯ ಪರೀಕ್ಷೆಗಳ ನಂತರ ಮೂತ್ರಪಿಂಡದಲ್ಲಿ 14ಎಂಎಂ ಕಲ್ಲು ಇರುವುದನ್ನ ಪತ್ತೆ ಮಾಡಿತ್ತು. ಸೆಪ್ಟೆಂಬರ್​​​ 3ರಂದು ಆತನಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಈ ವೇಳೆ ವೈದ್ಯರು ಕಿಡ್ನಿಯನ್ನೇ ತೆಗೆದಿದ್ದಾರೆ. ಬಳಿಕ ರೋಗಿಯ ಪ್ರಾಣವನ್ನು ಉಳಿಸಲು ಮೂತ್ರಪಿಂಡ ತೆಗೆಯುವುದು ಅನಿವಾರ್ಯವಾಗಿತ್ತು ಎಂದು ಹೇಳಿಕೊಂಡಿದ್ದಾರೆ.

ಮೃತರ ಸಂಬಂಧಿಯ ಮನವಿಯನ್ನು ಆಲಿಸಿದ ಗುಜರಾತ್ ರಾಜ್ಯ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗವು, ಮೃತನ ಸಂಬಂಧಿಕರಿಗೆ 11.23 ಲಕ್ಷ ಪರಿಹಾರ ನೀಡುವಂತೆ ಕೆಎಂಜಿ ಜನರಲ್​ ಆಸ್ಪತ್ರೆ ಆದೇಶಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT