ಸಾಂದರ್ಭಿಕ ಚಿತ್ರ 
ದೇಶ

ತಮಿಳುನಾಡು: ತ್ಯಾಜ್ಯದಲ್ಲಿ ಸಿಕ್ಕ 100 ಗ್ರಾಂ ಚಿನ್ನದ ನಾಣ್ಯವನ್ನು ಮಾಲೀಕರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರ ಕಾರ್ಮಿಕ ಮಹಿಳೆ!

ತಮಿಳುನಾಡಿನ ತಿರುವೊಟ್ಟಿಯೂರಿನಲ್ಲಿ ಕಸ ವಿಲೇವಾರಿ ವಿಭಾಗದ ಕೆಲಸಗಾರ, ಕಸದೊಳಗೆ ಸಿಕ್ಕ 7.5 ಲಕ್ಷ ರೂಪಾಯಿ ಮೌಲ್ಯದ 100 ಗ್ರಾಂ ಚಿನ್ನದ ನಾಣ್ಯವನ್ನು ಅದರ ಮಾಲೀಕರಿಗೆ ಹಿಂದಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

ಚೆನ್ನೈ: ತಮಿಳುನಾಡಿನ ತಿರುವೊಟ್ಟಿಯೂರಿನಲ್ಲಿ ಕಸ ವಿಲೇವಾರಿ ವಿಭಾಗದ ಕೆಲಸಗಾರ, ಕಸದೊಳಗೆ ಸಿಕ್ಕ 7.5 ಲಕ್ಷ ರೂಪಾಯಿ ಮೌಲ್ಯದ 100 ಗ್ರಾಂ ಚಿನ್ನದ ನಾಣ್ಯವನ್ನು ಅದರ ಮಾಲೀಕರಿಗೆ ಹಿಂದಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

ಕೊರಿಯರ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ತಿರುವೊಟ್ಟಿಯೂರಿನ ಅಣ್ಣಾಮಲೈ ನಗರದ ನಾಣ್ಯದ ಮಾಲೀಕ ಗಣೇಶ್ ರಾಮನ್ ಅವರು ಚಿನ್ನದ ನಾಣ್ಯವನ್ನು ಖರೀದಿಸಿ ಅದನ್ನು ಹಾಸಿಗೆಯ ಕೆಳಗೆ ಆಭರಣ ಸುತ್ತುವ ಗುಲಾಬಿ ಬಣ್ಣದ ಕಾಗದದಲ್ಲಿ ಮುಚ್ಚಿಟ್ಟಿದ್ದರು. ಆದರೆ ಅವರ ಪತ್ನಿ ಕಣ್ಣುತಪ್ಪಿ ಚಿನ್ನದ ನಾಣ್ಯವನ್ನು ಇತರ ತ್ಯಾಜ್ಯದೊಂದಿಗೆ ಕಸದ ತೊಟ್ಟಿಯಲ್ಲಿ ಎಸೆದಿದ್ದರು. ನಾಣ್ಯ ನಾಪತ್ತೆಯಾದ ನಂತರ ರಾಮನ್ ಅವರು ಪೊಲೀಸರಿಗೆ ದೂರು ನೀಡಿದ್ದರು.

ಆ ದಿನ ಯಾರು ಕಸವನ್ನು ತೆರವುಗೊಳಿಸುತ್ತಿದ್ದರು ಎಂದು ಪತ್ತೆ ಮಾಡಲು ಪೊಲೀಸರು ಸಿಸಿಟಿವಿ ದಶ್ಯಗಳನ್ನು ಪರಿಶೀಲಿಸಿದ್ದರು. ಆದರೆ ಆಶ್ಚರ್ಯಕರ ರೀತಿಯಲ್ಲಿ ಪೌರ ಕಾರ್ಮಿಕ ಮಹಿಳೆ ಮೇರಿ ಈಗಾಗಲೇ ತನ್ನ ಮ್ಯಾನೇಜರ್ ಮೂಲಕ ಅಧಿಕಾರಿಗಳಿಗೆ ನಾಣ್ಯವನ್ನು ಹಿಂದಿರುಗಿಸಿದ್ದಾರೆ ಎಂಬ ಮಾಹಿತಿಯನ್ನು ಪೊಲೀಸರು ತಿಳಿದುಕೊಂಡರು.

ಕಸವನ್ನು ವಿಂಗಡಿಸುವಾಗ, ಮೇರಿ ಚಿನ್ನದ ನಾಣ್ಯ ಸಿಕ್ಕಿದ್ದು, ಯಾವುದೇ ಮರು ಆಲೋಚನೆ ಮಾಡದೆ, ತಕ್ಷಣವೇ ತನ್ನ ಮೇಲ್ವಿಚಾರಕ ಸೆಂತಮಿಜಾನ್‌ಗೆ ಮಾಹಿತಿ ತಿಳಿಸಿದ್ದಾರೆ. ಅವರು ಆ ನಾಣ್ಯವನ್ನು ಸತ್ಯಂಗಡು ಪೊಲೀಸ್ ಠಾಣೆಗೆ ಹಸ್ತಾಂತರಿಸಿದರು. 

ವಿಚಾರಣೆಯ ನಂತರ, ನಾಣ್ಯವನ್ನು ಗಣೇಶ್ ರಾಮನ್ ಅವರಿಗೆ ಹಸ್ತಾಂತರಿಸಲಾಯಿತು ಮತ್ತು ಆಕೆಯ ಪ್ರಾಮಾಣಿಕತೆಗಾಗಿ ಸಂರಕ್ಷಣಾ ಕಾರ್ಯಕರ್ತೆ ಎಂದು ಪ್ರಶಂಸಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

ಮೊದಲು ಪರಮೇಶ್ವರ್ ಕೂಲಿ ಚುಕ್ತಾ ಮಾಡಲಿ: ನಂತರ ವಿಧಾನಸಭೆ ವಿಸರ್ಜಿಸಿ ಡಿಕೆಶಿ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ!

ನಾವು ಬಿಟ್ಟರು ಧರ್ಮ, ಜಾತಿ ನಮ್ಮನ್ನು ಬಿಡುವುದಿಲ್ಲ: ಒಕ್ಕಲಿಗನಾಗಿ ಹುಟ್ಟಿದ್ದೇನೆ; ಅಶೋಕಣ್ಣನಿಗೆ ಬ್ಯಾಡ್ಜ್ ಕಳಿಸುತ್ತೇನೆ ಹಾಕಿಕೊಳ್ಳಲಿ; DKS

ಅಮೆರಿಕ ಶಕ್ತಿ ಕೇಂದ್ರ ಶ್ವೇತಭವನ ಬಳಿ ಇಬ್ಬರು ಯುಎಸ್ ರಾಷ್ಟ್ರೀಯ ಗಾರ್ಡ್ ಗಳ ಮೇಲೆ ಗುಂಡಿನ ದಾಳಿ: ಶಂಕಿತನ ಗುರುತು ಪತ್ತೆ

SCROLL FOR NEXT