ಸಾಂದರ್ಭಿಕ ಚಿತ್ರ 
ದೇಶ

ತಮಿಳುನಾಡು: ತ್ಯಾಜ್ಯದಲ್ಲಿ ಸಿಕ್ಕ 100 ಗ್ರಾಂ ಚಿನ್ನದ ನಾಣ್ಯವನ್ನು ಮಾಲೀಕರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರ ಕಾರ್ಮಿಕ ಮಹಿಳೆ!

ತಮಿಳುನಾಡಿನ ತಿರುವೊಟ್ಟಿಯೂರಿನಲ್ಲಿ ಕಸ ವಿಲೇವಾರಿ ವಿಭಾಗದ ಕೆಲಸಗಾರ, ಕಸದೊಳಗೆ ಸಿಕ್ಕ 7.5 ಲಕ್ಷ ರೂಪಾಯಿ ಮೌಲ್ಯದ 100 ಗ್ರಾಂ ಚಿನ್ನದ ನಾಣ್ಯವನ್ನು ಅದರ ಮಾಲೀಕರಿಗೆ ಹಿಂದಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

ಚೆನ್ನೈ: ತಮಿಳುನಾಡಿನ ತಿರುವೊಟ್ಟಿಯೂರಿನಲ್ಲಿ ಕಸ ವಿಲೇವಾರಿ ವಿಭಾಗದ ಕೆಲಸಗಾರ, ಕಸದೊಳಗೆ ಸಿಕ್ಕ 7.5 ಲಕ್ಷ ರೂಪಾಯಿ ಮೌಲ್ಯದ 100 ಗ್ರಾಂ ಚಿನ್ನದ ನಾಣ್ಯವನ್ನು ಅದರ ಮಾಲೀಕರಿಗೆ ಹಿಂದಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

ಕೊರಿಯರ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ತಿರುವೊಟ್ಟಿಯೂರಿನ ಅಣ್ಣಾಮಲೈ ನಗರದ ನಾಣ್ಯದ ಮಾಲೀಕ ಗಣೇಶ್ ರಾಮನ್ ಅವರು ಚಿನ್ನದ ನಾಣ್ಯವನ್ನು ಖರೀದಿಸಿ ಅದನ್ನು ಹಾಸಿಗೆಯ ಕೆಳಗೆ ಆಭರಣ ಸುತ್ತುವ ಗುಲಾಬಿ ಬಣ್ಣದ ಕಾಗದದಲ್ಲಿ ಮುಚ್ಚಿಟ್ಟಿದ್ದರು. ಆದರೆ ಅವರ ಪತ್ನಿ ಕಣ್ಣುತಪ್ಪಿ ಚಿನ್ನದ ನಾಣ್ಯವನ್ನು ಇತರ ತ್ಯಾಜ್ಯದೊಂದಿಗೆ ಕಸದ ತೊಟ್ಟಿಯಲ್ಲಿ ಎಸೆದಿದ್ದರು. ನಾಣ್ಯ ನಾಪತ್ತೆಯಾದ ನಂತರ ರಾಮನ್ ಅವರು ಪೊಲೀಸರಿಗೆ ದೂರು ನೀಡಿದ್ದರು.

ಆ ದಿನ ಯಾರು ಕಸವನ್ನು ತೆರವುಗೊಳಿಸುತ್ತಿದ್ದರು ಎಂದು ಪತ್ತೆ ಮಾಡಲು ಪೊಲೀಸರು ಸಿಸಿಟಿವಿ ದಶ್ಯಗಳನ್ನು ಪರಿಶೀಲಿಸಿದ್ದರು. ಆದರೆ ಆಶ್ಚರ್ಯಕರ ರೀತಿಯಲ್ಲಿ ಪೌರ ಕಾರ್ಮಿಕ ಮಹಿಳೆ ಮೇರಿ ಈಗಾಗಲೇ ತನ್ನ ಮ್ಯಾನೇಜರ್ ಮೂಲಕ ಅಧಿಕಾರಿಗಳಿಗೆ ನಾಣ್ಯವನ್ನು ಹಿಂದಿರುಗಿಸಿದ್ದಾರೆ ಎಂಬ ಮಾಹಿತಿಯನ್ನು ಪೊಲೀಸರು ತಿಳಿದುಕೊಂಡರು.

ಕಸವನ್ನು ವಿಂಗಡಿಸುವಾಗ, ಮೇರಿ ಚಿನ್ನದ ನಾಣ್ಯ ಸಿಕ್ಕಿದ್ದು, ಯಾವುದೇ ಮರು ಆಲೋಚನೆ ಮಾಡದೆ, ತಕ್ಷಣವೇ ತನ್ನ ಮೇಲ್ವಿಚಾರಕ ಸೆಂತಮಿಜಾನ್‌ಗೆ ಮಾಹಿತಿ ತಿಳಿಸಿದ್ದಾರೆ. ಅವರು ಆ ನಾಣ್ಯವನ್ನು ಸತ್ಯಂಗಡು ಪೊಲೀಸ್ ಠಾಣೆಗೆ ಹಸ್ತಾಂತರಿಸಿದರು. 

ವಿಚಾರಣೆಯ ನಂತರ, ನಾಣ್ಯವನ್ನು ಗಣೇಶ್ ರಾಮನ್ ಅವರಿಗೆ ಹಸ್ತಾಂತರಿಸಲಾಯಿತು ಮತ್ತು ಆಕೆಯ ಪ್ರಾಮಾಣಿಕತೆಗಾಗಿ ಸಂರಕ್ಷಣಾ ಕಾರ್ಯಕರ್ತೆ ಎಂದು ಪ್ರಶಂಸಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT