ಉತ್ತರಖಂಡ ಪ್ರವಾಹ 
ದೇಶ

ಉತ್ತರಾಖಂಡದಲ್ಲಿ ವರುಣನ ಅಬ್ಬರ: ಸಾವಿನ ಸಂಖ್ಯೆ 52ಕ್ಕೆ ಏರಿಕೆ; ಉತ್ತರ ಪ್ರದೇಶ, ಬಂಗಾಳ, ಸಿಕ್ಕಿಂನಲ್ಲೂ ಮಳೆಯ ಆರ್ಭಟ

ಮಳೆಯಿಂದ ತತ್ತರಿಸಿರುವ ಉತ್ತರಾಖಂಡದಲ್ಲಿ ಬುಧವಾರ ಮತ್ತೆ ಆರು ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಇದರೊಂದಿಗೆ ಹಿಮಾಲಯನ್ ರಾಜ್ಯದಲ್ಲಿ ಮಳೆ ಸಂಬಂಧಿ ಅವಘಡಗಳಿಗೆ ಸಿಲುಕಿ ಮೃತಪಟ್ಟವರ ಸಂಖ್ಯೆ 52ಕ್ಕೆ ತಲುಪಿದೆ.

ನವದೆಹಲಿ: ಮಳೆಯಿಂದ ತತ್ತರಿಸಿರುವ ಉತ್ತರಾಖಂಡದಲ್ಲಿ ಬುಧವಾರ ಮತ್ತೆ ಆರು ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಇದರೊಂದಿಗೆ ಹಿಮಾಲಯನ್ ರಾಜ್ಯದಲ್ಲಿ ಮಳೆ ಸಂಬಂಧಿ ಅವಘಡಗಳಿಗೆ ಸಿಲುಕಿ ಮೃತಪಟ್ಟವರ ಸಂಖ್ಯೆ 52ಕ್ಕೆ ತಲುಪಿದೆ.

ಉತ್ತರ ಪ್ರದೇಶ, ಸಿಕ್ಕಿಂ ಮತ್ತು ಉತ್ತರ ಬಂಗಾಳದ ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ಹಲವು ಕಡೆ ಭೂಕುಸಿತ ಸಂಭವಿಸಿದೆ. ಪರಿಣಾಮ ಗ್ಯಾಂಗ್ಟಾಕ್ ಅನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 10 ಅನ್ನು ಸಂಪೂರ್ಣ ಬಂದ್ ಮಾಡಲಾಗಿದೆ.

ಕಳೆದ ಎರಡು ದಿನಗಳಿಂದ ಉತ್ತರ ಪ್ರದೇಶದ ಬರೇಲಿ ಮತ್ತು ಪಿಲಿಭಿತ್ ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮೂವರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ನಿರಾಶ್ರಿತರಾಗಿದ್ದಾರೆ.

ಉತ್ತರಾಖಂಡದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ 17 ಜನರು ಗಾಯಗೊಂಡಿದ್ದಾರೆ ಮತ್ತು ಐವರು ನಾಪತ್ತೆಯಾಗಿದ್ದಾರೆ. 

ನಾಪತ್ತೆಯಾದವರ ಅಧಿಕೃತ ಪಟ್ಟಿಯಲ್ಲಿ ಟ್ರೆಕ್ಕಿಂಗ್ ತೆರಳಿದ್ದ 11 ಜನರ ತಂಡದ ಹೆಸರಿಲ್ಲ. ಉತ್ತರಕಾಶಿಯಿಂದ ಹೊರಟ ಈ ತಂಡ ಹಿಮಾಚಲ ಪ್ರದೇಶದ ಚಿಟ್ಕುಲ್ ಅನ್ನು ತಲುಪಿಲ್ಲ.

ಮಳೆಯಿಂದ ಹೆಚ್ಚು ಹಾನಿಗೊಳಗಾದ ರಾಜ್ಯದ ಕುಮಾನ್ ಪ್ರದೇಶದಲ್ಲಿ 46 ಮನೆಗಳಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಉಧಮ್ ಸಿಂಗ್ ನಗರ ಮತ್ತು ಚಂಪಾವತ್ ಜಿಲ್ಲೆಗಳ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ, ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT