ಉತ್ತರಖಂಡ ಪ್ರವಾಹ 
ದೇಶ

ಉತ್ತರಾಖಂಡದಲ್ಲಿ ವರುಣನ ಅಬ್ಬರ: ಸಾವಿನ ಸಂಖ್ಯೆ 52ಕ್ಕೆ ಏರಿಕೆ; ಉತ್ತರ ಪ್ರದೇಶ, ಬಂಗಾಳ, ಸಿಕ್ಕಿಂನಲ್ಲೂ ಮಳೆಯ ಆರ್ಭಟ

ಮಳೆಯಿಂದ ತತ್ತರಿಸಿರುವ ಉತ್ತರಾಖಂಡದಲ್ಲಿ ಬುಧವಾರ ಮತ್ತೆ ಆರು ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಇದರೊಂದಿಗೆ ಹಿಮಾಲಯನ್ ರಾಜ್ಯದಲ್ಲಿ ಮಳೆ ಸಂಬಂಧಿ ಅವಘಡಗಳಿಗೆ ಸಿಲುಕಿ ಮೃತಪಟ್ಟವರ ಸಂಖ್ಯೆ 52ಕ್ಕೆ ತಲುಪಿದೆ.

ನವದೆಹಲಿ: ಮಳೆಯಿಂದ ತತ್ತರಿಸಿರುವ ಉತ್ತರಾಖಂಡದಲ್ಲಿ ಬುಧವಾರ ಮತ್ತೆ ಆರು ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಇದರೊಂದಿಗೆ ಹಿಮಾಲಯನ್ ರಾಜ್ಯದಲ್ಲಿ ಮಳೆ ಸಂಬಂಧಿ ಅವಘಡಗಳಿಗೆ ಸಿಲುಕಿ ಮೃತಪಟ್ಟವರ ಸಂಖ್ಯೆ 52ಕ್ಕೆ ತಲುಪಿದೆ.

ಉತ್ತರ ಪ್ರದೇಶ, ಸಿಕ್ಕಿಂ ಮತ್ತು ಉತ್ತರ ಬಂಗಾಳದ ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ಹಲವು ಕಡೆ ಭೂಕುಸಿತ ಸಂಭವಿಸಿದೆ. ಪರಿಣಾಮ ಗ್ಯಾಂಗ್ಟಾಕ್ ಅನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 10 ಅನ್ನು ಸಂಪೂರ್ಣ ಬಂದ್ ಮಾಡಲಾಗಿದೆ.

ಕಳೆದ ಎರಡು ದಿನಗಳಿಂದ ಉತ್ತರ ಪ್ರದೇಶದ ಬರೇಲಿ ಮತ್ತು ಪಿಲಿಭಿತ್ ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮೂವರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ನಿರಾಶ್ರಿತರಾಗಿದ್ದಾರೆ.

ಉತ್ತರಾಖಂಡದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ 17 ಜನರು ಗಾಯಗೊಂಡಿದ್ದಾರೆ ಮತ್ತು ಐವರು ನಾಪತ್ತೆಯಾಗಿದ್ದಾರೆ. 

ನಾಪತ್ತೆಯಾದವರ ಅಧಿಕೃತ ಪಟ್ಟಿಯಲ್ಲಿ ಟ್ರೆಕ್ಕಿಂಗ್ ತೆರಳಿದ್ದ 11 ಜನರ ತಂಡದ ಹೆಸರಿಲ್ಲ. ಉತ್ತರಕಾಶಿಯಿಂದ ಹೊರಟ ಈ ತಂಡ ಹಿಮಾಚಲ ಪ್ರದೇಶದ ಚಿಟ್ಕುಲ್ ಅನ್ನು ತಲುಪಿಲ್ಲ.

ಮಳೆಯಿಂದ ಹೆಚ್ಚು ಹಾನಿಗೊಳಗಾದ ರಾಜ್ಯದ ಕುಮಾನ್ ಪ್ರದೇಶದಲ್ಲಿ 46 ಮನೆಗಳಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಉಧಮ್ ಸಿಂಗ್ ನಗರ ಮತ್ತು ಚಂಪಾವತ್ ಜಿಲ್ಲೆಗಳ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ, ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!