ಸಂಗ್ರಹ ಚಿತ್ರ 
ದೇಶ

ಕಲ್ಲಿನ ಬದಲು ಕಿಡ್ನಿಯನ್ನೇ ಹೊರ ತೆಗೆದ ವೈದ್ಯರು, ವ್ಯಕ್ತಿ ಸಾವು: 11 ಲಕ್ಷ ಪರಿಹಾರ ನೀಡುವಂತೆ ಸೂಚನೆ

ಗುಜರಾತ್ ನ ಮಹಿಸಾಗರ್ ಜಿಲ್ಲೆಯ ಬಾಲಸಿನೋರ್ ನಲ್ಲಿರುವ ಕೆಎಂಜಿ ಜನರಲ್​ ಆಸ್ಪತ್ರೆಯ ವೈದ್ಯರ ನಿರ್ಲಕ್ಷದಿಂದ ರೋಗಿಯೊಬ್ಬ ಪ್ರಾಣವನ್ನು ಕಳೆದುಕೊಂಡಿದ್ದಾನೆ. 

ಅಹಮದಾಬಾದ್: ಗುಜರಾತ್ ನ ಮಹಿಸಾಗರ್ ಜಿಲ್ಲೆಯ ಬಾಲಸಿನೋರ್ ನಲ್ಲಿರುವ ಕೆಎಂಜಿ ಜನರಲ್​ ಆಸ್ಪತ್ರೆಯ ವೈದ್ಯರ ನಿರ್ಲಕ್ಷದಿಂದ ರೋಗಿಯೊಬ್ಬ ಪ್ರಾಣವನ್ನು ಕಳೆದುಕೊಂಡಿದ್ದಾನೆ. 

ಈ ಆಸ್ಪತ್ರೆಯಲ್ಲಿ ರೋಗಿಯೊಬ್ಬರಿಗೆ ಕಳೆದ ನಾಲ್ಕು ತಿಂಗಳಿನಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ವ್ಯಕ್ತಿಯ ಕಿಡ್ನಿಯಲ್ಲಿ ಸ್ಟೋನ್​ ಇದ್ದು, ಅದನ್ನು ತೆಗೆಯಲು ವೈದ್ಯರು ಶಸ್ತ್ರ ಚಿಕಿತ್ಸೆ ಮಾಡಲು ಮುಂದಾಗಿದ್ದಾರೆ. ಆದರೆ ಶಸ್ತ್ರ ಚಿಕಿತ್ಸೆ ವೇಳೆ ಕಿಡ್ನಿಯಲ್ಲಿನ ಕಲ್ಲು ತೆಗೆಯುವ ಬದಲು ಕಿಡ್ನಿಯನ್ನೇ ತೆಗೆದಿದ್ದಾರೆ. ಇದರಿಂದ ರೋಗಿ ಮೃತಪಟ್ಟಿದ್ದಾನೆ.

ಡಾ. ಶಿವುಭಾಯಿ ಪಟೇಲ್​​ ನೇತೃತ್ವದ ತಂಡ ಅನೇಕ ವೈದ್ಯಕೀಯ ಪರೀಕ್ಷೆಗಳ ನಂತರ ಮೂತ್ರಪಿಂಡದಲ್ಲಿ 14ಎಂಎಂ ಕಲ್ಲು ಇರುವುದನ್ನ ಪತ್ತೆ ಮಾಡಿತ್ತು. ಸೆಪ್ಟೆಂಬರ್​​​ 3ರಂದು ಆತನಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಈ ವೇಳೆ ವೈದ್ಯರು ಕಿಡ್ನಿಯನ್ನೇ ತೆಗೆದಿದ್ದಾರೆ. ಬಳಿಕ ರೋಗಿಯ ಪ್ರಾಣವನ್ನು ಉಳಿಸಲು ಮೂತ್ರಪಿಂಡ ತೆಗೆಯುವುದು ಅನಿವಾರ್ಯವಾಗಿತ್ತು ಎಂದು ಹೇಳಿಕೊಂಡಿದ್ದರು.

ಆದರೆ ಅಹಮದಾಬಾದ್ ನ ಗ್ರಾಹಕ ನ್ಯಾಯಾಲಯವು ಆಸ್ಪತ್ರೆಯೊಂದಕ್ಕೆ 11.23 ಲಕ್ಷ ರೂ.ಗಳನ್ನು ಮೃತ ರೋಗಿಯ ಕುಟುಂಬಸ್ಥರಿಗೆ ಪರಿಹಾರವಾಗಿ ನೀಡುವಂತೆ ಸೂಚಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT