ಸಾವನ್ನಪ್ಪಿದ್ದ ಮಗು ಹಾಗೂ ಶಿಕ್ಷಕನ ಚಿತ್ರ 
ದೇಶ

ಹೋಮ್ ವರ್ಕ್ ಮಾಡಿಲ್ಲವೆಂದು ವಿದ್ಯಾರ್ಥಿಗೆ ಥಳಿಸಿದ ಶಿಕ್ಷಕ: ಕ್ಷಣದಲ್ಲೇ ಬಾಲಕ ಸಾವು!

ಹೋಮ್​ವರ್ಕ್​ ಮಾಡದಿದ್ದಕ್ಕೆ ಶಿಕ್ಷಕನಿಂದ ಹಲ್ಲೆಗೊಳಗಾದ ಏಳನೇ ತರಗತಿ ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ಘಟನೆ ಚುರು ಜಿಲ್ಲೆಯ ಸಲಸರ್ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲಾಸಾರ್ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.

ಚುರು: ಹೋಮ್​ವರ್ಕ್​ ಮಾಡದಿದ್ದಕ್ಕೆ ಶಿಕ್ಷಕನಿಂದ ಹಲ್ಲೆಗೊಳಗಾದ ಏಳನೇ ತರಗತಿ ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ಘಟನೆ ಚುರು ಜಿಲ್ಲೆಯ ಸಲಸರ್ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲಾಸಾರ್ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.

ಹೋಮ್​​ವರ್ಕ್​ ಮಾಡಿಲ್ಲ ಎಂದು ಶಿಕ್ಷಕ ಮಗುವನ್ನು ನೆಲಕ್ಕೆ ಹಾಕಿ ಒದ್ದು, ಮುಷ್ಟಿಕಟ್ಟಿ ಹೊಡೆದಿದ್ದಾನೆ. ತುಂಬಾ ಹೊಡೆದ ನಂತರ ಬಾಲಕನ ಮೂಗಿನಿಂದ ರಕ್ತ ಬರಲಾರಂಭಿಸಿದೆ. ಬಳಿಕ ಆತ ಮೂರ್ಛೆ ಹೋಗಿದ್ದಾನೆ. ಮಗುವಿಗೆ ಪ್ರಜ್ಞೆ ಮರಳದಿದ್ದಾಗ, ಆರೋಪಿತ ಶಿಕ್ಷಕ ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ಅಲ್ಲಿ ವೈದ್ಯರು ವಿದ್ಯಾರ್ಥಿ  ಮೃತಪಟ್ಟಿದ್ದಾನೆ ಎಂದು ಹೇಳಿದ್ದಾರೆ. 

ಕೋಲಾಸಾರ್ ಗ್ರಾಮದ ನಿವಾಸಿ 13 ವರ್ಷದ ಗಣೇಶ್ ಖಾಸಗಿ ಶಾಲೆಯಲ್ಲಿ ಓದಿದ್ದಾನೆ. ಬುಧವಾರ ಬೆಳಗ್ಗೆ ಮಗು ಶಾಲೆಗೆ ಹೋಗಿತ್ತು. ಹೋಮ್​ವರ್ಕ್ ಮಾಡದ ಕಾರಣ ಶಿಕ್ಷಕ ಮನೋಜ್ ತುಂಬಾ ಹೊಡೆದಿದ್ದಾರೆ. ಈ ಕಾರಣದಿಂದ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ತಂದೆಯ ವರದಿಯ ಮೇರೆಗೆ ಶಿಕ್ಷಕನ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಸಲಸಾರ್ ಎಸ್ ಎಚ್ ಒ ಸಂದೀಪ್ ವಿಷ್ಣೋಯ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT