ಜ.ಬಿಪಿನ್ ರಾವತ್ (ಸಂಗ್ರಹ ಚಿತ್ರ) 
ದೇಶ

ಚೀನಾದ ಸೈಬರ್​ ತಂತ್ರಜ್ಞಾನ ಬೆಳವಣಿಗೆ ಅತ್ಯಂತ ಕಳವಳಕಾರಿ: ಬಿಪಿನ್ ರಾವತ್

ಭಾರತವು ಅಸಂಖ್ಯಾತ ಬಾಹ್ಯ ಭದ್ರತಾ ಸವಾಲುಗಳನ್ನು ಎದುರಿಸುತ್ತಿದೆ ಮತ್ತು ಸೈಬರ್ ಮತ್ತು ಬಾಹ್ಯಾಕಾಶ ಕ್ಷೇತ್ರಗಳಲ್ಲಿ ಚೀನಾದ ತಾಂತ್ರಿಕ ಪ್ರಗತಿಯು ಅತ್ಯಂತ ಚಿಂತಾಜನಕವಾಗಿದೆ ಎಂದು ರಕ್ಷಣಾ ಪಡೆಗಳ ಮುಖ್ಯಸ್ಥ...

ಬೆಂಗಳೂರು: ಭಾರತವು ಅಸಂಖ್ಯಾತ ಬಾಹ್ಯ ಭದ್ರತಾ ಸವಾಲುಗಳನ್ನು ಎದುರಿಸುತ್ತಿದೆ ಮತ್ತು ಸೈಬರ್ ಮತ್ತು ಬಾಹ್ಯಾಕಾಶ ಕ್ಷೇತ್ರಗಳಲ್ಲಿ ಚೀನಾದ ತಾಂತ್ರಿಕ ಪ್ರಗತಿಯು ಅತ್ಯಂತ ಚಿಂತಾಜನಕವಾಗಿದೆ ಎಂದು ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಶುಕ್ರವಾರ ಹೇಳಿದ್ದಾರೆ.

1971ರ ಭಾರತ-ಪಾಕ್ ಯುದ್ಧದಲ್ಲಿ 50 ವರ್ಷಗಳ ವಿಜಯದ ನೆನಪಿಗಾಗಿ ಆಚರಿಸಲಾಗುತ್ತಿರುವ 'ಸ್ವರ್ಣಿಮ್ ವಿಜಯ್ ವರ್ಷ್' ಕಾರ್ಯಕ್ರಮದಲ್ಲಿ ಮಾತನಾಡಿದ ಬಿಪಿನ್ ರಾವತ್ ಅವರು, ಭಾರತವು ಅಸಂಖ್ಯಾತ ಬಾಹ್ಯ ಭದ್ರತಾ ಸವಾಲುಗಳನ್ನು ಪ್ರಾದೇಶಿಕ ಅಂತರ್​ ಸಂಪರ್ಕಗಳೊಂದಿಗೆ ಎದುರಿಸುತ್ತಿದೆ. ಪರಿಹರಿಸಲಾಗದ ಗಡಿ ವಿವಾದಗಳ ಪರಂಪರೆ, ಸ್ಪರ್ಧೆಯ ಸಂಸ್ಕೃತಿ ಮತ್ತು ಭಾರತದ ಕಾರ್ಯತಂತ್ರದ ಜಾಗವನ್ನು ದುರ್ಬಲಗೊಳಿಸುವ ಸವಾಲು ಎದುರಾಗಿದೆ ಎಂದು ತಿಳಿಸಿದರು.

ಸೈಬರ್ ಮತ್ತು ಬಾಹ್ಯಾಕಾಶ ಡೊಮೇನ್‌ಗಳಲ್ಲಿ ಚೀನಾದ ತಾಂತ್ರಿಕ ಪ್ರಗತಿಗಳು ಅತ್ಯಂತ ಕಳವಳಕಾರಿಯಾಗಿದ್ದು, ರಕ್ಷಣಾ ವ್ಯವಸ್ಥೆಯನ್ನು ಸೈಬರ್ ದಾಳಿಯಿಂದ ರಕ್ಷಿಸುವುದೇ ದೇಶದ ಮುಂದಿರುವ ದೊಡ್ಡ ಸವಾಲು ಎಂದು ಬಿಪಿನ್ ರಾವತ್ ಹೇಳಿದ್ದಾರೆ.

'ಯಾವುದೇ ಒಂದು ಕ್ಷೇತ್ರದ ಮೇಲೆ ಸೈಬರ್ ದಾಳಿ ನಡೆದರೂ ನಮ್ಮ ಯುದ್ಧ ಸಾಮರ್ಥ್ಯದ ಮೇಲೆ ಪ್ರತಿಕೂಲ ಪರಿಣಾಮ ಆಗುತ್ತದೆ. ರಕ್ಷಣಾ ವ್ಯವಸ್ಥೆ ಸೈಬರ್ ದಾಳಿಗೆ ಸಿಲುಕದಂತೆ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ಅದಕ್ಕೆ ಪೂರಕವಾಗಿ ಭೂ ಸೇನೆ, ವಾಯು ಸೇನೆ ಮತ್ತು ನೌಕಾ ದಳಗಳು ಜಂಟಿಯಾಗಿ ಪ್ರಯತ್ನ ಆರಂಭಿಸಿವೆ' ಎಂದರು.

ಬ್ಯಾಂಕಿಂಗ್, ಸಾರಿಗೆ, ಇಂಧನ ಸೇರಿದಂತೆ ಯಾವುದೇ ಕ್ಷೇತ್ರವೂ ಸೈಬರ್ ದಾಳಿಯಿಂದ ತೊಂದರೆಗೆ ಸಿಲುಕಬಾರದು. ಎಲ್ಲ ಕ್ಷೇತ್ರಗಳು ಒಂದಕ್ಕೊಂದು ಪೂರಕವಾಗಿವೆ. ಪ್ರಮುಖ ಕ್ಷೇತ್ರಗಳ ಮೇಲೆ ನಡೆಯುವ ದಾಳಿಯು ಸೇನಾ ಪಡೆಗಳಿಗೂ ಅನಾನುಕೂಲ ಉಂಟುಮಾಡುತ್ತದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT