ಸಂಗ್ರಹ ಚಿತ್ರ 
ದೇಶ

ಕೋವಿಡ್-19: ಭಾರತದಲ್ಲಿಂದು 15,786 ಹೊಸ ಕೇಸ್ ಪತ್ತೆ, 231 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 15,786 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 231 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 15,786 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 231 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಶುಕ್ರವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,41,43,236ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,53,042ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,75,745ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 18,641 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,35,14,449ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 12,47,506 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 59,57,42,218 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,00,59,04,580 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

ಧರ್ಮಸ್ಥಳ ಪ್ರಕರಣ: ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ ಒತ್ತಾಯ; ಹೊಸ ದೂರು ದಾಖಲು!

News headlines 28-08-2025| ಚಾಮುಂಡಿ ದೇವರು ಹಿಂದೂಗಳ ಆಸ್ತಿ ಅಲ್ಲ- DK Shivakumar; ಪ್ರಮೋದಾ ದೇವಿ ಒಡೆಯರ್ ಪ್ರತಿಕ್ರಿಯೆ ಏನು..?; ರಾಜ್ಯದಲ್ಲಿ ಹಲವೆಡೆ IMD Yellow alert; ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಮತ್ತೆ ED ಕಸ್ಟಡಿಗೆ

SCROLL FOR NEXT