ಭೀಕರ ಅಗ್ನಿ ಅವಘಡ 
ದೇಶ

ಮುಂಬೈ: 61 ಅಂತಸ್ತಿನ ಬೃಹತ್ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ, 1 ಸಾವು, ಹಲವರು ಸಿಲುಕಿರುವ ಶಂಕೆ

ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿ ಪ್ರಮಾದದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಹಲವರು ಸಿಲುಕಿರುವ ಶಂಕೆ ಎದುರಾಗಿದೆ.

ಮುಂಬೈ: ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿ ಪ್ರಮಾದದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಹಲವರು ಸಿಲುಕಿರುವ ಶಂಕೆ ಎದುರಾಗಿದೆ.

ಸೆಂಟ್ರಲ್ ಮುಂಬೈನ ಮಾಧವ್ ಪಾಲವ್ ಮಾರ್ಗದಲ್ಲಿರುವ ಅವಿಘ್ನ ಪಾರ್ಕ್ ಕಟ್ಟಡದಲ್ಲಿ ಇಂದು ಮಧ್ಯಾಹ್ನ ಬೆಂಕಿ ಹೊತ್ತಿಕೊಂಡಿತು. ಸುಮಾರು 61 ಅಂತಸ್ತಿನ ಈ ವಸತಿ ಕಟ್ಟಡದ 19ನೇ ಅಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ವಿಚಾರ ತಿಳಿಯುತ್ತಲೇ 8ಕ್ಕೂ ಹೆಚ್ಚು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಿದ್ದಾರೆ. 

ಓರ್ವ ವ್ಯಕ್ತಿ ಸಾವು
ಇನ್ನು ಅಗ್ನಿ ಪ್ರಮಾದದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಸುಮಾರು 30 ವರ್ಷದ ಸ್ಥಳೀಯ ನಿವಾಸಿ ಬೆಂಕಿಯಿಂದ ತಪ್ಪಿಸಿಕೊಳ್ಳಲು ಬಾಲ್ಕನಿಯಿಂದ ಕೆಳಗೆ ಇಳಿಯಲು ಯತ್ನಿಸಿದ್ದಾರೆ. ಈ ವೇಳೆ ಆಯತಪ್ಪಿ ಅವರು ಕೆಳಗೆ ಬಿದ್ದಿದ್ದು, ಸ್ಥಳದಲ್ಲೇ ಪ್ರಾಣಪಕ್ಷಿ ಹಾರಿಹೋಗಿದೆ ಎಂದು ತಿಳಿದುಬಂದಿದೆ.

ಇನ್ನು ವಸತಿ ಕಟ್ಟಡವಾದ್ದರಿಂದ ಸಾಕಷ್ಟು ಕುಟುಂಬಗಳು ಇಲ್ಲಿ ವಾಸವಾಗಿದ್ದವು. ಹೀಗಾಗಿ ಕಟ್ಟಡದಲ್ಲಿ ಹಲವರು ಸಿಲುಕಿರುವ ಶಂಕೆ ಇದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಮೇಯರ್ ದೌಡು
ದುರಂತ ನಡೆದ ಸ್ಥಳಕ್ಕೆ ಮುಂಬೈ ಮೇಯರ್ ಕಿಶೋರಿ ಪಡ್ನೇಕರ್ ಅವರು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT