ಸಂಗ್ರಹ ಚಿತ್ರ 
ದೇಶ

ಉತ್ತರಾಖಂಡ: ಹಿಮದ ನಡುವೆ ಸಿಲುಕಿ 12 ಚಾರಣಿಗರ ದುರ್ಮರಣ: ನಾಪತ್ತೆಯಾದವರಿಗಾಗಿ ತೀವ್ರಗೊಂಡ ಹುಡುಕಾಟ

ಮಳೆ, ಪ್ರವಾಹದಿಂದ ತತ್ತರಿಸಿರುವ ಉತ್ತರಾಖಂಡ, ಮತ್ತಷ್ಟು ಅನಾಹುತಗಳಿಗೆ ಸಾಕ್ಷಿಯಾಗುತ್ತಿದೆ. ಮಳೆಯ ಬೆನ್ನಲ್ಲೇ ಹಿಮಾಲಯ ಪರ್ವತ ಪ್ರದೇಶಗಳಲ್ಲಿ ವಿಪರೀತ ಹಿಮ ಸುರಿಯುತ್ತಿರುವುದು ಭಾರಿ ಅವಘಡಕ್ಕೆ ಕಾರಣವಾಗಿದೆ.

ನವದೆಹಲಿ: ಮಳೆ, ಪ್ರವಾಹದಿಂದ ತತ್ತರಿಸಿರುವ ಉತ್ತರಾಖಂಡ, ಮತ್ತಷ್ಟು ಅನಾಹುತಗಳಿಗೆ ಸಾಕ್ಷಿಯಾಗುತ್ತಿದೆ. ಮಳೆಯ ಬೆನ್ನಲ್ಲೇ ಹಿಮಾಲಯ ಪರ್ವತ ಪ್ರದೇಶಗಳಲ್ಲಿ ವಿಪರೀತ ಹಿಮ ಸುರಿಯುತ್ತಿರುವುದು ಭಾರಿ ಅವಘಡಕ್ಕೆ ಕಾರಣವಾಗಿದೆ.

ಪ್ರತಿಕೂಲ ಹವಾಮಾನದಿಂದ ಉಂಟಾದ ಭಾರೀ ಪ್ರಮಾಣದ ಹಿಮಪಾತದಿಂದಾಗಿ ಅಕ್ಟೋಬರ್​ 18ರಂದು ದಾರಿ ತಪ್ಪಿದ್ದ 22 ಚಾರಣಿಗರಲ್ಲಿ 12 ಮಂದಿಯ ಮೃತದೇಹವನ್ನು ವಾಯುಸೇನೆ ವಶಕ್ಕೆ ಪಡದುಕೊಂಡಿದ್ದು, ನಾಪತ್ತೆಯಾದವರಿಗಾಗಿ ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರೆಸಿದೆ.

ಈ ಕುರಿತು ಮಾಹಿತಿ ನೀಡಿರುವ ಉತ್ತರಾಖಂಡ್ ಪೊಲೀಸ್ ಮಹಾ ನಿರ್ದೇಶಕ (ಡಿಜಿಪಿ) ಅಶೋಕ್ ಕುಮಾರ್ ಅವರು, ಉತ್ತರಾಖಂಡ ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್‌ಡಿಆರ್‌ಎಫ್) ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದ್ದು, ಹರ್ಷಿಲ್‌ನಲ್ಲಿ 11 ಚಾರಣಿಗರ ಗುಂಪು ಕಾಣೆಯಾಗಿದೆ. ಇದರಲ್ಲಿ ಏಳು ಚಾರಣಿಗರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇಬ್ಬರು ಚಾರಣಿಗರನ್ನು ರಕ್ಷಿಸಲಾಗಿದ್ದು, ಇನ್ನಿಬ್ಬರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಹೇಳಿದ್ದಾರೆ.

ಇದೇ ರೀತಿ 11 ಮಂದಿ ಚಾರಣಿಗರ ಮತ್ತೊಂದು ತಂಡ ನಾಪತ್ತೆಯಾಗಿದೆ. ಇದರಲ್ಲಿ 5 ಮೃತದೇಹಗಳ ವಶಪಡಿಸಿಕೊಳ್ಳಲಾಗಿದ್ದು, ನಾಲ್ವರು ಚಾರಣಿಗರನ್ನು ಸುರಕ್ಷಿತವಾಗಿ ರಕ್ಷಣೆ ಮಾಡಲಾಗಿದೆ. ಇಬ್ಬರು ನಾಪತ್ತೆಯಾಗಿದ್ದಾರೆಂದು. ಎರಡು ಪ್ರತ್ಯೇಕ ಸ್ಥಳಗಳಲ್ಲಿ ಎಂಡು ತಂಡಗಳಲ್ಲಿ ಒಟ್ಟು 22 ಮಂದಿ ನಾಪತ್ತೆಯಾಗಿದ್ದು, ಈ ವರೆಗು 12 ಮೃತದೇಹಗಳುವಶಪಡಿಸಿಕೊಂಡು 6 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ನಾಲ್ವರಿಗಾಗಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT