ಪ್ರಿಯಾಂಕಾ ಗಾಂಧಿ ವಾದ್ರಾ 
ದೇಶ

2022 ಉತ್ತರಪ್ರದೇಶ ಚುನಾವಣೆ: ಬಾರಾಬಂಕಿಯಲ್ಲಿ ಪ್ರತಿಜ್ಞಾ ಯಾತ್ರೆ ಉದ್ಘಾಟಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ

ಪ್ರತಿಜ್ಞಾ ಯಾತ್ರೆ ವೇಳೆ ಮಾತನಾಡಿದ ಪ್ರಿಯಾಂಕಾ ಗಾಂಧಿ ರಾಜ್ಯದ ಜನತೆಗೆ ಕಾಂಗ್ರೆಸ್ ಪಕ್ಷವು 7 ವಾಗ್ದಾನಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ. ಆ 7 ಭರವಸೆಗಳು ಯಾವುವು ಎಂದರೆ...

ಲಖನೌ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಉತ್ತರಪ್ರದೇಶದಲ್ಲಿ ಪಕ್ಷದ ಉಸ್ತುವಾರಿ ಹೊತ್ತುಕೊಂಡಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಬಾರಾಬಂಕಿಯಲ್ಲಿ ಪ್ರತಿಜ್ಞಾ ಯಾತ್ರೆಗೆ ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಪ್ರಿಯಾಂಕಾ ಗಾಂಧಿ ರಾಜ್ಯದ ಜನತೆಗೆ ಕಾಂಗ್ರೆಸ್ ಪಕ್ಷವು 7 ವಾಗ್ದಾನಗಳನ್ನು ಈಡೇರಿಸುವುದಾಗಿ ತಿಳಿಸಿದ್ದಾರೆ. 

ಬಾರಾಬಂಕಿಯಿಂದ ಶುರುವಾದ ಪ್ರತಿಜ್ಞಾ ಯಾತ್ರೆ ನವೆಂಬರ್1 ರಂದು ಬುಂದೇಲ್ ಖಂಡ್ ಪ್ರಾಂತ್ಯದಲ್ಲಿ ಕೊನೆಗೊಳ್ಳಲಿದೆ. ಯಾತ್ರೆಯು ಸಹಾರನ್ ಪುರ, ಮಥುರಾ, ವಾರಾಣಸಿ ಮತ್ತು ರಾಯ್ ಬರೇಲಿಯನ್ನು ಹಾದುಹೋಗಲಿದೆ. 

ಉತ್ತರಪ್ರದೇಶದ ಜನರಿಗೆ ಕಾಂಗ್ರೆಸ್ ನೀಡಿರುವ 7 ವಾಗ್ದಾನಗಳು ಹೀಗಿವೆ: ಶೇ.40ರಷ್ಟು ಮಹಿಳಾ ಅಭ್ಯರ್ಥಿಗಳಿಗೆ ಪಕ್ಷದ ಟಿಕೆಟ್, ವಿದ್ಯಾರ್ಥಿನಿಯರಿಗೆ ಸ್ಮಾರ್ಟ್ ಫೋನ್ ಮತ್ತು ಇ-ಸ್ಕೂಟರ್ ಗಳು, ರೈತರ ಸಾಲ ಸಂಪೂರ್ಣ ಮನ್ನಾ, ಗೋದಿ ಮತ್ತು ಬತ್ತ ಬೆಳೆಗೆ 2,500 ರೂ. ಕನಿಷ್ಟ ಬೆಲೆ(ಎಂ.ಎಸ್.ಪಿ) ನಿಗದಿ, ಸಾಂಕ್ರಾಮಿಕ ಸಮಯದ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವವರಿಗೆ  ಅರ್ಧ ಮೊತ್ತ ಮನ್ನಾ, ಸಾಂಕ್ರಾಮಿಕದಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಕುಟುಂಬಗಳಿಗೆ 25,000 ರೂ. ಸಹಾಯಧನ, ೨೫ ಲಕ್ಷ ಮಂದಿಗೆ ಸರ್ಕಾರಿ ಉದ್ಯೋಗ.

Related Article

ಲಖಿಂಪುರ್ ಖೇರಿ ಹಿಂಸಾಚಾರ: ದೆಹಲಿ ಸರ್ಕಾರಿ ಕಾರ್ಯಕ್ರಮಕ್ಕೆ ಅಜಯ್ ಮಿಶ್ರಾ ಹಾಜರು; ರಾಜೀನಾಮೆಗೆ ಪ್ರಿಯಾಂಕಾ ಗಾಂಧಿ ಪಟ್ಟು

ಆದೇಶ, ಎಫ್ ಐಆರ್ ಇಲ್ಲದೇ ನನ್ನ ಗೃಹಬಂಧನ; ರೈತರ ಪ್ರಾಣ ತೆಗೆದ ಮಂತ್ರಿ ಪುತ್ರನ ಬಂಧನವೇಕಿಲ್ಲ: ಪ್ರಧಾನಿಗೆ ಪ್ರಿಯಾಂಕಾ ಗಾಂಧಿ ವಾದ್ರಾ

ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಉತ್ತರ ಪ್ರದೇಶ ಚುನಾವಣೆ; ಯಾರೊಂದಿಗೂ ಮೈತ್ರಿ ಇಲ್ಲ: ಸಲ್ಮಾನ್ ಖುರ್ಷಿದ್

ರೈತರ ಘರ್ಜನೆ ಮುಂದೆ ಬಿಜೆಪಿಯ ಅಧಿಕಾರದ ಮದ ನಿಲ್ಲದು: ಕಿಸಾನ್ ಮಹಾಪಂಚಾಯತ್ ಪರ ಪ್ರಿಯಾಂಕಾ ಗಾಂಧಿ ಬ್ಯಾಟಿಂಗ್

ನೂತನ ಕೃಷಿ ಕಾನೂನುಗಳಿಂದ ಬಿಜೆಪಿಯ ಕೋಟ್ಯಾಧಿಪತಿ ಸ್ನೇಹಿತರಿಗಷ್ಟೇ ಲಾಭ, ರೈತರಿಗಲ್ಲ: ಪ್ರಿಯಾಂಕಾ ಗಾಂಧಿ ವಾದ್ರಾ

ದೇಣಿಗೆ ಹಣ ದುರುಪಯೋಗ ಭಕ್ತರ ನಂಬಿಕೆಗೆ ಮಾಡಿದ ದ್ರೋಹ: ಅಯೋಧ್ಯಾ ಭೂ ಹಗರಣದ ಬಗ್ಗೆ ಪ್ರಿಯಾಂಕಾ ವಾದ್ರಾ ಕಿಡಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

SCROLL FOR NEXT