ಆರ್ಯನ್ ಖಾನ್, ದಿಗ್ವಿಜಯ್ ಸಿಂಗ್ 
ದೇಶ

ಶಾರೂಖ್ ಖಾನ್ ಪುತ್ರನಾಗಿರುವುದರಿಂದ ಆರ್ಯನ್ ಖಾನ್ ಬಲಿಪಶು: ದಿಗ್ವಿಜಯ್ ಸಿಂಗ್ 

ಡ್ರಗ್ಸ್ ಕೇಸ್ ಗೆ ಸಂಬಂಧಿಸಿದಂತೆ ಎನ್ ಸಿಬಿಯಿಂದ ಬಂಧನಕ್ಕೊಳಗಾಗಿರುವ ಆರ್ಯನ್ ಖಾನ್, ಬಾಲಿವುಡ್ ಸೂಪರ್ ಸ್ಟಾರ್ ಶಾರೂಖ್ ಖಾನ್ ಪುತ್ರನಾಗಿರುವುದರಿಂದ ಆತನನ್ನು ಬಲಿಪಶು ಮಾಡಲಾಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಶನಿವಾರ ಆರೋಪಿಸಿದ್ದಾರೆ.

ನವದೆಹಲಿ: ಡ್ರಗ್ಸ್ ಕೇಸ್ ಗೆ ಸಂಬಂಧಿಸಿದಂತೆ ಎನ್ ಸಿಬಿಯಿಂದ ಬಂಧನಕ್ಕೊಳಗಾಗಿರುವ ಆರ್ಯನ್ ಖಾನ್, ಬಾಲಿವುಡ್ ಸೂಪರ್ ಸ್ಟಾರ್ ಶಾರೂಖ್ ಖಾನ್ ಪುತ್ರನಾಗಿರುವುದರಿಂದ ಆತನನ್ನು ಬಲಿಪಶು ಮಾಡಲಾಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಶನಿವಾರ ಆರೋಪಿಸಿದ್ದಾರೆ.

ದಿಗ್ವಿಜಯ್ ಸಿಂಗ್ ಹೇಳಿಕೆ ಕುರಿತು ಕಿಡಿಕಾರಿರುವ ಬಿಜೆಪಿ,  ದಿಗ್ವಿಜಯ್ ಸಿಂಗ್ ರಾಜಕೀಯ ತುಷ್ಟೀಕರಣದ ಆಟವಾಡುತ್ತಿದ್ದಾರೆ ಎಂದು ಹೇಳಿದೆ.

ಮುಂಬೈಯ ಕರಾವಳಿಯಲ್ಲಿ ಕ್ರೂಸ್ ಶಿಪ್ ಮೇಲೆ ಅಕ್ಟೋಬರ್ 3 ರಂದು ಎನ್ ಸಿಬಿ ದಾಳಿಯ ನಂತರ ಆರ್ಯನ್ ಖಾನ್ ನನ್ನು ಬಂಧಿಸಲಾಗಿತ್ತು. ಸದ್ಯ ಜೈಲಿನಲ್ಲಿರುವ ಆರ್ಯನ್ ಖಾನ್, ವಿಶೇಷ ಕೋರ್ಟ್ ಜಾಮೀನು ಅರ್ಜಿಯನ್ನು ನಿರಾಕರಿಸಿದ ನಂತರ ಬಾಂಬೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಅಕ್ಟೋಬರ್ 26 ರಂದು ಬಾಂಬೆ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ಶಾರೂಖ್ ಖಾನ್ ಅವರ ಪುತ್ರನಾಗಿರುವುದರಿಂದ ಆತನನ್ನು ಬಲಿಪಶು ಮಾಡಿರುವುದು ಬೇಸರವಾಗಿದೆ. ಆತನ ಅಪರಾಧ ಏನು? ಆತನ ಜೊತೆಯಲ್ಲಿದ್ದವನ ಬಳಿ 5 ಗ್ರಾಮ್ ಡ್ರಗ್ಸ್  ಸಿಕ್ಕಿದೆ. ಮುಂದ್ರಾ ಬಂದರಿನಲ್ಲಿ ಟನ್ ಗಟ್ಟಲೇ ವಶಕ್ಕೆ ಪಡೆದ ಹೆರಾಯಿನ್ ಬಗ್ಗೆ ಏನಾಯಿತು? ಕುಲದೀಪ್ ಸಿಂಗ್ ಯಾರು? ಎನ್ ಸಿಬಿ ಮತ್ತು ಎನ್ ಐಎ ಈ ಕೇಸ್ ಬಗ್ಗೆ ವಿಚಾರಣೆ ನಡೆಸುತ್ತಿದ್ದೆಯೇ ಎಂಬುದನ್ನು ನಮಗೆ ಹೇಳಲಿ ಎಂದು ದಿಗ್ವಿಜಯ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ದಿಗ್ವಿಜಯ್ ಹೇಳಿಕೆ ವಿರುದ್ಧ ಪ್ರತಿದಾಳಿ ನಡೆಸಿರುವ ಮಧ್ಯ ಪ್ರದೇಶ ಬಿಜೆಪಿ, ನ್ಯಾಯಾಲಯದ ಆದೇಶ ಕಾಯದೆ ಕಾಂಗ್ರೆಸ್ ಮುಖಂಡರೇ ತೀರ್ಪು ನೀಡಿದ್ದಾರೆ. ಅಂತಿಮವಾಗಿ ದಿಗ್ವಿಜಯ್ ಸಿಂಗ್ ಆರ್ಯನ್ ಖಾನ್ ರಕ್ಷಣೆಗೆ ಬಂದಿದ್ದಾರೆ. ತನಿಖಾ ತಂಡ ವಾಸ್ತವ ಅಂಶ ಪರಿಶೀಲಿಸುತ್ತಿರುವಾಗ ದಿಗ್ವಿಜಯ್ ಸಿಂಗ್ ತೀರ್ಪು ನೀಡಿದ್ದಾರೆ. ಇಂತಹ ತುಷ್ಟೀಕರಣ ರಾಜಕಾರಣ ಮಾಡುವ ಮೂಲಕ ಎಷ್ಟು ದಿನಗಳವರೆಗೆ ಜನರನ್ನು ನೀವು ಹಾದಿ ತಪ್ಪಿಸುತ್ತೀರಾ? ಎಂದು ಬಿಜೆಪಿ ಪ್ರಶ್ನಿಸಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT