ಕಾಂಗ್ರೆಸ್ ಲೋಗೋ 
ದೇಶ

ಬಿಹಾರದಲ್ಲಿ ಪಕ್ಷವನ್ನು ಪುನರುಜ್ಜೀವನಗೊಳಿಸಲು ಆರ್ ಜೆಡಿ ಜೊತೆ ಮೈತ್ರಿ ತೊರೆದ ಕಾಂಗ್ರೆಸ್

ಬಿಹಾರ ರಾಜಕಾರಣಕ್ಕೆ ಜಿಗ್ನೇಶ್ ಮೇವಾನಿ, ಹಾರ್ದಿಕ್ ಪಟೇಲ್, ಕನ್ಹಯ್ಯ ಕುಮಾರ್ ಅವರ ಪ್ರವೇಶದ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ತನ್ನ ಕಾರ್ಯತಂತ್ರವನ್ನು ಬದಲಾಯಿಸಿಕೊಂಡಿದ್ದು, ಆರ್ ಜೆಡಿಯೊಂದಿಗಿನ ಮೈತ್ರಿಯಿಂದ ಹೊರ ನಡೆದಿದೆ. 

ಪಾಟ್ನ: ಬಿಹಾರ ರಾಜಕಾರಣಕ್ಕೆ ಜಿಗ್ನೇಶ್ ಮೇವಾನಿ, ಹಾರ್ದಿಕ್ ಪಟೇಲ್, ಕನ್ಹಯ್ಯ ಕುಮಾರ್ ಅವರ ಪ್ರವೇಶದ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ತನ್ನ ಕಾರ್ಯತಂತ್ರವನ್ನು ಬದಲಾಯಿಸಿಕೊಂಡಿದ್ದು, ಆರ್ ಜೆಡಿಯೊಂದಿಗಿನ ಮೈತ್ರಿಯಿಂದ ಹೊರ ನಡೆದಿದೆ. 

ಆರ್ ಜೆಡಿಯೊಂದಿಗಿನ ಮೈತ್ರಿಯಿಂದ ಹೊರಬರುವ ವಿಷಯವನ್ನು ಸ್ಪಷ್ಟಪಡಿಸಿರುವ ಕಾಂಗ್ರೆಸ್ ಬಿಹಾರದ ಮುಂಬರುವ ಉಪಚುನಾವಣೆಯಲ್ಲಿ ಅಷ್ಟೇ ಅಲ್ಲದೇ 2024 ರಲ್ಲಿ 40 ಲೋಕಸಭಾ ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಹೇಳಿದೆ.

ಕನ್ಹಯ್ಯ ಕುಮಾರ್, ಜಿಗ್ನೇಶ್ ಮೇವಾನಿ ಹಾಗೂ ಹಾರ್ದಿಕ್ ಪಟೇಲ್ ಅವರು ಮುಂಬರುವ ವಿಧಾನಸಭಾ ಉಪಚುನಾವಣೆಗೆ ಸ್ಟಾರ್ ಪ್ರಚಾರಕರಾಗಿದ್ದಾರೆ.

ಕನ್ಹಯ್ಯ ಕುಮಾರ್ ನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳಿಸಿಕೊಳ್ಳುತ್ತಿದ್ದಂತೆಯೇ ಆರ್ ಜೆಡಿ-ಕಾಂಗ್ರೆಸ್ ನಡುವಿನ ಭಿನ್ನಾಭಿಪ್ರಾಯ ತೀವ್ರಗೊಂಡಿತ್ತು.

ಅ.30 ರಂದು ನಡೆಯಲಿರುವ ಚುನಾವಣೆಗೆ ಕುಶೇಶ್ವರ್ ಆಸ್ತಾನ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಬೇಕೆಂದು ಪಟ್ಟು ಹಿಡಿದಿತ್ತು. 2020 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್ ಈ ಕ್ಷೇತ್ರದಿಂದ ಸ್ಪರ್ಧಿಸಿತ್ತು. ಆದರೆ ಈ ಬಾರಿ ಎರಡೂ ಕ್ಷೇತ್ರಗಳಲ್ಲಿ ಆರ್ ಜೆಡಿ ತನ್ನ ಅಭ್ಯರ್ಥಿಯನ್ನು ಘೋಷಿಸಿತ್ತು.

ಉಪಚುನಾವಣೆಗಳ ಬೆಳವಣಿಗೆ ಕಾಂಗ್ರೆಸ್ ಗೆ ತನ್ನ ಕಾಲ ಮೇಲೆ ತಾನು ನಿಲ್ಲಬೇಕೆಂಬ ಪಾಠ ಕಲಿಸಿದೆ. ದೀರ್ಘಾವಧಿಯಲ್ಲಿ ಯಾವುದೇ ಪಕ್ಷದ ಮೇಲೆ ಅವಲಂಬನೆ ಇರುವುದು ಸೂಕ್ತವಲ್ಲ ಎಂಬುದು ಅರ್ಥವಾಗಿದೆ ಎಂದು ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ತಾರೀಕ್ ಅನ್ವರ್ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷ ಕನ್ಹಯ್ಯ ಕುಮಾರ್ ನಂತಹ ನಾಯಕರೊಂದಿಗೆ ಚುನಾವಣೆ ಎದುರಿಸಲು ಸಜ್ಜುಗೊಂಡಿದ್ದು ಎರಡು ಕ್ಷೇತ್ರಗಳಲ್ಲಿ ಪಕ್ಷ ಗೆಲ್ಲಲಿದೆ ಎಂದು ಬಿಹಾರ ಪ್ರದೇಶ ಕಾಂಗ್ರೆಸ್ ಪಕ್ಷದ ಉಸ್ತುವಾರಿಯಾಗಿರುವ ಭಕ್ತ ಚರಣ್ ದಾಸ್ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT