ಶ್ರೀನಗರ- ಶಾರ್ಜಾ ವಿಮಾನ ಉದ್ಘಾಟನೆ ಮಾಡುತ್ತಿರುವ ಅಮಿತ್ ಶಾ 
ದೇಶ

ಜಮ್ಮು ಕಾಶ್ಮೀರ: ಮೊದಲು ಗಡಿ ನಿರ್ಣಯ, ನಂತರ ರಾಜ್ಯ ಸ್ಥಾನಮಾನ: ಅಮಿತ್ ಶಾ

370ನೇ ವಿಧಿ ತೆಗೆದುಹಾಕಿದ ಬಳಿಕ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿರುವ ಅಮಿತ್ ಶಾ ಮೂರು ದಿನಗಳ ಕಾಲ ಅಲ್ಲಿನ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಶ್ರೀನಗರ: ಶನಿವಾರ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದ ಕೇಂದ್ರ ಗೃಹಸಚಿವ ಅಮಿತ್ ಶಾ ಕಾಶ್ಮೀರ ರಾಜ್ಯ ಸ್ಥಾನಮಾನವನ್ನು ಗಡಿ ನಿರ್ಣಯ(ಡಿಲಿಮಿಟೇಷನ್) ಹಾಗೂ ವಿಧಾನಸಭಾ ಚುನಾವಣೆ ಬಳಿಕ ಪುನರ್ ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.

370ನೇ ವಿಧಿ ತೆಗೆದುಹಾಕಿದ ಬಳಿಕ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿರುವ ಅಮಿತ್ ಶಾ ಮೂರು ದಿನಗಳ ಕಾಲ ಅಲ್ಲಿನ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಶನಿವಾರ ಅವರು ಶ್ರೀನಗರದ ಯುವ ಸಂಘಸಂಸ್ಥೆಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಗಡಿ ನಿರ್ಣಯವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಗಡಿ ನಿರ್ಣಯ ಆಗಿಯೇ ತೀರುತ್ತದೆ. ಆದರೆ ಚುನಾವಣೆ ಬಳಿಕ. ಆಗಲೇ ಕಾಶ್ಮೀರದ ರಾಜ್ಯ ಸ್ಥಾನಮಾನವನ್ನೂ ಪುನರ್ ಸ್ಥಾಪಿಸಲಾಗುವುದು. ಇದರಿಂದಾಗಿ ರಾಜ್ಯದ ಯುವ ಪೀಳಿಗೆಗೆ ಉದ್ಯೋಗಾವಕಾಶಗಳು ಹೆಚ್ಚಲಿದೆ. ಎಂದು ಶಾ ಅಭಿಪ್ರಾಯಪಟ್ಟಿದ್ದಾರೆ. 

ತಮ್ಮ ಭಾಷಣದ ನಡುವೆ ಅಮಿತ್ ಶಾ ಜಮ್ಮು ಕಾಶ್ಮೀರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಯಾರಿಂದಲೂ ತಡೆಗಟ್ಟಲು ಸಾಧ್ಯವಿಲ್ಲ.ರಾಜ್ಯದಲ್ಲಿ ಶಾಂತಿ ಕದಡಲು ಯಾರಾದರೂ ಯತ್ನಿಸಿದಲ್ಲಿ ಅಂಥವರ ವಿರುದ್ಧ ಕಠಿಣ ಕ್ರಮ ಜರುಗಿಸುವ ಭರವಸೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ