ಬಂಧಿತ ಶ್ರೀಲಂಕಾ ಮೀನುಗಾರರು 
ದೇಶ

ನಾಗಪಟ್ಟಿಣಂ: ಗಡಿ ದಾಟಿ ಬಂದು ಭಾರತದ ಕಡಲ ತೀರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಇಬ್ಬರು ಶ್ರೀಲಂಕಾ ಮೀನುಗಾರರ ಬಂಧನ 

ಕೊಡಿಯಕರೈ ಬಳಿ ಭಾರತ ಕಡಲ ತೀರ ಪ್ರದೇಶವನ್ನು ದಾಟಿ ಬಂದ ಇಬ್ಬರು ಶ್ರೀಲಂಕಾದ ಮೀನುಗಾರರನ್ನು ಭಾರತೀಯ ನೌಕಾಪಡೆ ಸಿಬ್ಬಂದಿ ಬಂಧಿಸಿದ್ದಾರೆ. 

ನಾಗಪಟ್ಟಿಣಂ: ಕೊಡಿಯಕರೈ ಬಳಿ ಭಾರತ ಕಡಲ ತೀರ ಪ್ರದೇಶವನ್ನು ದಾಟಿ ಬಂದ ಇಬ್ಬರು ಶ್ರೀಲಂಕಾದ ಮೀನುಗಾರರನ್ನು ಭಾರತೀಯ ನೌಕಾಪಡೆ ಸಿಬ್ಬಂದಿ ಬಂಧಿಸಿದ್ದಾರೆ. 

ನಾಗಪಟ್ಟಿಣಂ ಜಿಲ್ಲೆಯ ಕೊಡಿಯಕರೈ ನೈರುತ್ಯ ಭಾಗದಲ್ಲಿ 16 ಮೈಲಿ ದೂರದಲ್ಲಿ ಸಮುದ್ರದಲ್ಲಿ ನಿನ್ನೆ ನಸುಕಿನ ಜಾವ 5.30ರ ಸುಮಾರಿಗೆ ಮೀನುಗಾರಿಕೆ ನಡೆಸುತ್ತಿದ್ದ ಇಬ್ಬರು ಮೀನುಗಾರರು ಪತ್ತೆಯಾದರು. ಕೂಡಲೇ ಅವರನ್ನು ವಶಕ್ಕೆ ಪಡೆದು ಐಎನ್ಎಸ್ ಬಂಗರಾಮ್ ಹಡಗಿನಲ್ಲಿ ಮಧ್ಯರಾತ್ರಿ ವೇಳೆ ಕರೆತರಲಾಯಿತು ಎಂದು ನೌಕಾಪಡೆ ಅಧಿಕಾರಿಗಳು ತಿಳಿಸಿದ್ದಾರೆ.

ಬಂಧಿತರು ಶ್ರೀಲಂಕಾದ ಜಫ್ನ ಜಿಲ್ಲೆಯ ವಲ್ವೆಟ್ಟಿತುರೈಯ 24 ವರ್ಷದ ಕೆ ಮಿಮಲತಸ್ ಮತ್ತು 23 ವರ್ಷದ ಡಿ ಕಜೀಪನ್ ಎಂದು ಗುರುತಿಸಲಾಗಿದೆ ಎಂದು ಕಡಲ ಭದ್ರತಾ ಪಡೆಯ ಅಧಿಕಾರಿಗಳು ತಿಳಿಸಿದ್ದಾರೆ. 

ಇಬ್ಬರು ಶ್ರೀಲಂಕಾದ ಮೀನುಗಾರರು ಅಂತಾರಾಷ್ಟ್ರೀಯ ಬಂದರು ಗಡಿರೇಖೆ(ಐಎಂಬಿಎಲ್)ನ್ನು ದಾಟಿ ಭಾರತದ ಸಮುದ್ರ ತೀರದಲ್ಲಿ ಮೀನುಗಾರಿಕೆ ಮಾಡುತ್ತಿದ್ದರು. ಅವರನ್ನು ವಶಕ್ಕೆ ಪಡೆದು ದೋಣಿಯನ್ನು ಸಹ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ನಾಗಪಟ್ಟಿಣಂ ಮೀನುಗಾರಿಕೆ ಇಲಾಖೆ ತಿಳಿಸಿದೆ.

ಕೋಸ್ಟಲ್ ಸೆಕ್ಯುರಿಟಿ ಗ್ರೂಪ್, ಇಬ್ಬರು ಶ್ರೀಲಂಕ ಮೀನುಗಾರರನ್ನು ಬಂಧಿಸಿ ವೇದಾರಣ್ಯಮ್ ಮೆರೈನ್ ಪೊಲೀಸ್ ಠಾಣೆಗೆ ಕರೆದೊಯ್ದರು, ಅಲ್ಲಿ ಭಾರತದ ಸಾಗರ ವಲಯಗಳ ಕಾಯಿದೆ 1981 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದರು. ಗಡಿ ಭದ್ರತಾ ಪಡೆ ಸಿಬ್ಬಂದಿ ನಂತರ ಆರೋಪಿಗಳನ್ನು ಚೆನ್ನೈಗೆ ಕರೆದೊಯ್ದಿದ್ದಾರೆ. ಮೀನುಗಾರರನ್ನು ಎಗ್ಮೋರ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುವುದು ಎಂದು ತಿಳಿದುಬಂದಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT