ಸಂಗ್ರಹ ಚಿತ್ರ 
ದೇಶ

ಜಮ್ಮು ಕಾಶ್ಮೀರದಲ್ಲಿ ಮುಂದುವರಿದ ಉಗ್ರರ ವಿರುದ್ಧ ಕಾರ್ಯಾಚರಣೆ: ಓರ್ವ ಯೋಧ, ಇಬ್ಬರು ಪೊಲೀಸರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ನಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿ ಮುಂದುವರೆದಿದ್ದು, ಈ ವೇಳೆ ಒಬ್ಬ ಯೋಧ ಮತ್ತು ಇಬ್ಬರು ಪೊಲೀಸ್​ ಸಿಬ್ಬಂದಿ ಗಾಯಗೊಂಡಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ನಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿ ಮುಂದುವರೆದಿದ್ದು, ಈ ವೇಳೆ ಒಬ್ಬ ಯೋಧ ಮತ್ತು ಇಬ್ಬರು ಪೊಲೀಸ್​ ಸಿಬ್ಬಂದಿ ಗಾಯಗೊಂಡಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಪೂಂಚ್​​ನಲ್ಲಿ ಅಕ್ಟೋಬರ್​ 10 ರಾತ್ರಿ ಉಗ್ರರ ದಾಳಿಗೆ ಮೂವರು ಯೋಧರು ಮತ್ತು ಒಬ್ಬ ಕಿರಿಯ ನಿಯೋಜಿತ ಅಧಿಕಾರಿ ಮೃತಪಟ್ಟಿದ್ದಾರೆ. ಅವರು ಹುತಾತ್ಮರಾದ ಪ್ರದೇಶದಲ್ಲಿ ಭಯೋತ್ಪಾದಕರ ಅಡಗುತಾಣವನ್ನು ಗುರುತಿಸಲು ಈಗಾಗಲೇ ಬಂಧಿತನಾದ ಡೆಟೆನ್ಯೂ ಝಿಯಾ ಮುಸ್ತಫಾ ಎಂಬ ಲಷ್ಕರ್​ ಎ ತೊಯ್ಬಾದ ಉಗ್ರನನ್ನು ಭದ್ರತಾ ಸಿಬ್ಬಂದಿ ಕರೆದೊಯ್ದಿದ್ದರು. ಈ ವೇಳೆ ಅಲ್ಲಿ ಅಡಗಿದ್ದ ಉಗ್ರರು ಒಮ್ಮೆಲೇ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಸೇನಾ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಡೆಟೆನ್ಯೂ ಝಿಯಾ ಮುಸ್ತಫಾನನ್ನು ಸೇನೆ ಮತ್ತು ಪೊಲೀಸ್​ ಸಿಬ್ಬಂದಿ ಜಂಟಿಯಾಗಿ ಸ್ಥಳಕ್ಕೆ ಕರೆದೊಯ್ದರು. ಅದು  ಗೊತ್ತಾಗುತ್ತಿದ್ದಂತೆ ಅಡಗಿದ್ದ ಭಯೋತ್ಪಾದಕರು ಗುಂಡಿನ ದಾಳಿ ನಡೆಸಲು ಶುರು ಮಾಡಿದರು.

ಈ ಗುಂಡಿನ ದಾಳಿಯಲ್ಲಿ ಇಬ್ಬರು ಪೊಲೀಸ್​ ಸಿಬ್ಬಂದಿ ಮತ್ತು ಒಬ್ಬ ಯೋಧ ಗಾಯಗೊಂಡಿದ್ದಾರೆ. ಜತೆಗೆ ಇದ್ದ ಉಗ್ರ ಝಿಯಾ ಮುಸ್ತಫಾ ಕೂಡ ಗಾಯಗೊಂಡಿದ್ದಾನೆ. ಒಂದೇ ಸಮಯ ಗುಂಡಿನ ದಾಳಿ ನಡೆಯುತ್ತಲೇ ಇದ್ದುದರಿಂದ ಆತನಿಗೆ ಅಲ್ಲಿಂದ ಹೊರಬೀಳಲೂ ಸಾಧ್ಯವಾಗಲಿಲ್ಲ ಎಂದೂ ತಿಳಿಸಿದ್ದಾರೆ.

ಪೂಂಚ್​​ನಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರಿದಿದೆ. ರಾಜೌರಿ ಮತ್ತು ಪೂಂಚ್​​ನಲ್ಲಿ ಅಡಗಿರುವ ಉಗ್ರರ ಗುಂಪಿನ ಬಳಿ ಭಾರಿ ಶಸ್ತ್ರಾಸ್ತ್ರಗಳಿವೆ. ಹಾಗೆಯೇ ತರಬೇತಿಯನ್ನೂ ಪಡೆದವರಾಗಿದ್ದಾರೆ. ಜಮ್ಮು-ಕಾಶ್ಮೀರದ ಜೈಲಿನಲ್ಲಿ ಈಗಿರುವ ಭಯೋತ್ಪಾದಕರೊಂದಿಗೆ ಸಂಪರ್ಕದಲ್ಲಿದ್ದ ಉಗ್ರರೇ ಆಗಿದ್ದಾರೆ. ಬಂಧಿತ ಉಗ್ರರ ಮೊಬೈಲ್​ ಪರಿಶೀಲನೆ ವೇಳೆ ಇದು ಗೊತ್ತಾಗಿದೆ ಎಂದೂ ಹಿರಿಯ ಅಧಿಕಾರಿ ಮಾಹಿತಿ ನೀಡಿದ್ದಾರೆ.  ಹಾಗೇ, ಇವರೆಲ್ಲರೂ ಪಾಕಿಸ್ತಾನ ಪೋಷಿತ ಉಗ್ರರೇ ಎಂದೂ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT