ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಐಟಿಬಿಪಿ ಸಿಬ್ಬಂದಿ 
ದೇಶ

ಲಡಾಖ್ ಘರ್ಷಣೆ: ಐಟಿಬಿಪಿ ಪಡೆಯ 20 ಸಿಬ್ಬಂದಿಗಳಿಗೆ ಶೌರ್ಯ ಪದಕಗಳ ಪ್ರದಾನ

ಲಡಾಖ್ ಘರ್ಷಣೆಯಲ್ಲಿ ಹೋರಾಡಿದ್ದ ಐಟಿಬಿಪಿಯ 20 ಸಿಬ್ಬಂದಿಗಳಿಗೆ ಶೌರ್ಯ ಪದಕಗಳನ್ನು ಪ್ರದಾನ ಮಾಡಿ ಗೌರವಿಸಲಾಗಿದೆ.

ಲಡಾಖ್: ಲಡಾಖ್ ಘರ್ಷಣೆಯಲ್ಲಿ ಹೋರಾಡಿದ್ದ ಐಟಿಬಿಪಿಯ 20 ಸಿಬ್ಬಂದಿಗಳಿಗೆ ಶೌರ್ಯ ಪದಕಗಳನ್ನು ಪ್ರದಾನ ಮಾಡಿ ಗೌರವಿಸಲಾಗಿದೆ.

ಮೇ-ಜೂನ್, 2020 ರಲ್ಲಿ ಈಶಾನ್ಯ ಲಡಾಖ್ ನಲ್ಲಿ ನಡೆದ ಚೀನಾ ಯೋಧರೊಂದಿಗಿನ ಹಿಂಸಾತ್ಮಕ ಸಂಘರ್ಷದಲ್ಲಿ ಐಟಿಬಿಪಿ ಯೋಧರು ತಮ್ಮ ಧೈರ್ಯ ಸಾಹಸಗಳಿಂದ ಚೀನಾ ಯೋಧರು ಹಿಮ್ಮೆಟ್ಟುವಂತೆ ಮಾಡಿದ್ದರು.

ಐಟಿಬಿಪಿಯ 60 ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಪದಕಗಳನ್ನು ಪ್ರದಾನ ಮಾಡಿದ್ದಾರೆ.

ಈ ಪದಕಗಳನ್ನು ಆ.14 ರಂದು ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಘೋಷಿಸಲಾಗಿತ್ತು. ವಾಸ್ತವಿಕ ನಿಯಂತ್ರಣ ರೇಖೆಯಾದ್ಯಂತ 3,488 ಕಿ.ಮೀ ವರೆಗೂ ಗಡಿಯನ್ನು ಕಾಯುವುದಕ್ಕೆ ಕೇಂದ್ರ ಅರೆಸೇನಾಪಡೆಯನ್ನು ನಿಯೋಜಿಸಲಾಗಿದೆ. 20 ಮಂದಿಯ ಪೈಕಿ 8 ಮಂದಿಗೆ ಜೂ.15 ರಂದು ಪದಕ ಪ್ರದಾನ ಮಾಡಲಾಗಿತ್ತು ಎಂದು ಐಟಿಬಿಪಿಯ ವಕ್ತಾರರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರೈತರು ಶಾಲು ಬೀಸಿದ್ದನ್ನು ನೋಡಿದರೆ ಬಿಹಾರದ ಗಾಳಿ ತಮಿಳುನಾಡಿಗೆ ಬಂದಂತೆ ಭಾಸವಾಯಿತು: ಪ್ರಧಾನಿ ಮೋದಿ

ಶಬರಿಮಲೆಯಲ್ಲಿ ಜನದಟ್ಟಣೆ: ಅಯ್ಯಪ್ಪ ಭಕ್ತರ ಸುರಕ್ಷಿತ, ಸುಗಮ ಸಂಚಾರಕ್ಕಾಗಿ ಕೇರಳಕ್ಕೆ ಕರ್ನಾಟಕ ಸರ್ಕಾರ ಮನವಿ!

"ಉಪಾಸನಾ ಕೊನಿಡೆಲಾ ಮಾತೆಲ್ಲಾ ಕೇಳ್ಬೇಡಿ; 20 ವರ್ಷಕ್ಕೆ ಮದುವೆಯಾಗಿ ಮಕ್ಕಳು ಮಾಡ್ಕೊಳಿ": Zoho ಸಂಸ್ಥಾಪಕನ ಮಾತು ಕೇಳಿ ಓಹೋ ಎಂದ ಜನ!

ನುಗ್ಗಿ ಹೊಡೆದಿದ್ದೇವೆ ಎಂಬ ಪಾಕ್ ಹೇಳಿಕೆ ಬೆನ್ನಲ್ಲೆ ಪ್ರತೀಕಾರಕ್ಕೆ ಮುಂದಾದ ಭಾರತ; ತೀವ್ರ ತಪಾಸಣೆ, ಟಾರ್ಗೆಟ್ ಫಿಕ್ಸ್, ಜಮ್ಮು-ಕಾಶ್ಮೀರದ ವೈದ್ಯರಿಗೆ ನಡುಕ!

'ನರಕಾಸುರ' ಮೋದಿಯನ್ನು ಕೊಲ್ಲಬೇಕು: ಜನರ ಎದುರೇ DMK ನಾಯಕನಿಂದ ಕೊಲೆ ಬೆದರಿಕೆ; ಚಪ್ಪಾಳೆ ತಟ್ಟಿದ ಮಹಿಳೆಯರು; Video

SCROLL FOR NEXT