ಸಂಗ್ರಹ ಚಿತ್ರ 
ದೇಶ

ಕೋವಿಡ್-19: ಭಾರತದಲ್ಲಿಂದು 14,306 ಹೊಸ ಕೇಸ್ ಪತ್ತೆ, 443 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 14,306 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 443 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 14,306 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 443 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಶನಿವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,41,89,774ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,54,712ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,67,695ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 18,762 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,35,67,367ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 9,98,397 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 60,07,69,717 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,02,27,12,895 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿ.ಕೆ ಶಿವಕುಮಾರ್; ಸಿದ್ದರಾಮಯ್ಯ ಮಾಹಿತಿ; ಮಧ್ಯಾಹ್ನ 2.30ಕ್ಕೆ ರಾಜೀನಾಮೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT