ಅಜಯ್ ಮಿಶ್ರಾ 
ದೇಶ

ಲಖಿಂಪುರ್ ಖೇರಿ ಹಿಂಸಾಚಾರ: ಕೇಂದ್ರ ಸಚಿವ ಅಜಯ್ ಮಿಶ್ರಾ ವಜಾಗೊಳಿಸುವಂತೆ ಒತ್ತಾಯಿಸಿ ನಾಳೆ ರೈತರ ಪ್ರತಿಭಟನೆ

ರೈತರು ಸೇರಿದಂತೆ ಎಂಟು ಮಂದಿಯನ್ನು ಬಲಿ ಪಡೆದ ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ರೈತರು ಮಂಗಳವಾರ ದೇಶಾದ್ಯಂತ ಪ್ರತಿಭಟನೆ....

ನೋಯ್ಡಾ: ರೈತರು ಸೇರಿದಂತೆ ಎಂಟು ಮಂದಿಯನ್ನು ಬಲಿ ಪಡೆದ ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ರೈತರು ಮಂಗಳವಾರ ದೇಶಾದ್ಯಂತ ಪ್ರತಿಭಟನೆ ನಡೆಸಲಿದ್ದಾರೆ.

ಎಸ್‌ಕೆಎಂ ಹಾಗೂ ಹಲವು ರೈತ ಸಂಘಗಳು ಕೇಂದ್ರ ಸರ್ಕಾರವು ತಮ್ಮ ಕಾನೂನುಬದ್ಧ ಬೇಡಿಕೆಗಳನ್ನು ಈಡೇರಿಸುವಂತೆ ನಿರಂತರವಾಗಿ ಒತ್ತಾಯ ಮಾಡಿಕೊಂಡೇ ಬರುತ್ತಿವೆ. ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧದ ರೈತರ ಪ್ರತಿಭಟನೆ 12ನೇ ತಿಂಗಳಿಗೆ ಕಾಲಿಡುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್ ಕೆಎಂ ಕೇಂದ್ರ ಸಚಿವರ ವಿರುದ್ಧ ಮತ್ತು ಕೃಷಿ ಕಾನೂನುಗಳ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿದೆ.

ದೇಶದ ಪ್ರತಿಯೊಂದು ಜಿಲ್ಲೆಯ ಆಡಳಿತ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು. ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂಬ ಬೇಡಿಕೆಯೊಂದಿಗೆ ಸರ್ಕಾರಕ್ಕೆ ಮನವಿ ಪತ್ರವನ್ನು ಸಲ್ಲಿಸಲಾಗುವುದು ಎಂದು ಬಿಕೆಯು ಮಾಧ್ಯಮ ಉಸ್ತುವಾರಿ ಧರ್ಮೇಂದ್ರ ಮಲಿಕ್ ಪಿಟಿಐಗೆ ತಿಳಿಸಿದ್ದಾರೆ.

ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಗೆ ದೇಶದ ಎಲ್ಲಾ ರೈತ ಸಂಘಟನೆಗಳು ಬೆಂಬಲಿಸಿವೆ. ಪ್ರತಿಭಟನೆಯ ಮೂಲಕ, ಈ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ನಾವು ಮತ್ತೊಮ್ಮೆ ಮನವಿ ಮಾಡುತ್ತೇವೆ ಎಂದು ಮಲಿಕ್ ಹೇಳಿದ್ದಾರೆ.

ಕೇಂದ್ರ ಸರ್ಕಾರ ತಮ್ಮ "ಕಾನೂನುಬದ್ಧ ಬೇಡಿಕೆಗಳಾದ" ಮೂರು ರೈತ ವಿರೋಧಿ ಕಾನೂನುಗಳನ್ನು ರದ್ದುಗೊಳಿಸಬೇಕು, ಎಲ್ಲಾ ಉತ್ಪನ್ನಗಳಿಗೆ ಮತ್ತು ಎಲ್ಲಾ ರೈತರಿಗೆ ಎಂಎಸ್‌ಪಿಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಬೇಕು ಹಾಗೂ ಕೇಂದ್ರ ಅಜಯ್ ಮಿಶ್ರಾ ಅವರನ್ನು ವಜಾಗಳಿಸಿ, ಬಂಧಿಸಬೇಕು ಎಂದು ಒತ್ತಾಯಿಸಿ ಎಸ್ ಕೆಎಂ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT