ಸಾಂದರ್ಭಿಕ ಚಿತ್ರ 
ದೇಶ

ರಹಸ್ಯ ಮಾಹಿತಿ ಸೋರಿಕೆ: ಸಿಬಿಐನಿಂದ ನೌಕಾದಳ ಅಧಿಕಾರಿ ಸೇರಿದಂತೆ ಐವರ ಬಂಧನ

ಪ್ರಕರಣ ಸಂಬಂಧ ಸಿಬಿಐ ದೆಹಲಿ, ಮುಂಬೈ, ಹೈದರಾಬಾದ್, ವಿಶಾಖಪಟ್ಟಣಂ ಸೇರಿದಂತೆ ಇದುವರೆಗೂ 19 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. 

ನವದೆಹಲಿ: ದೇಶದ ಸಬ್ ಮರೈನ್ ಪ್ರಾಜೆಕ್ಟ್ ಸಂಬಂಧಿಸಿದಂತೆ ರಹಸ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇರೆ ಸಿಬಿಐ, ನೌಕಾದಳ ಕಮಾಂಡರ್ ಸೇರಿದಂತೆ ಒಟ್ಟು ಐವರನ್ನು ಬಂಧಿಸಿದೆ. 

ಇಬ್ಬರು ನಿವೃತ್ತ ನೌಕಾದಳ ಸಿಬ್ಬಂದಿ ಹಾಗೂ ಓರ್ವ ವ್ಯಕ್ತಿಯನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದೆ. ಪ್ರಕರಣ ಸಂಬಂಧ ಸಿಬಿಐ ದೆಹಲಿ, ಮುಂಬೈ, ಹೈದರಾಬಾದ್, ವಿಶಾಖಪಟ್ಟಣಂ ಸೇರಿದಂತೆ ಇದುವರೆಗೂ 19 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. 

ಶೋಧ ಕಾರ್ಯಾಚರಣೆ ವೇಳೆ ದಾಖಲೆಪತ್ರಗಳು, ಡಿಜಿಟಲ್ ಸಾಕ್ಷ್ಯಗಳು ಸಿಬಿಐ ಅಧಿಕಾರಿಗಳಿಗೆ ಲಭ್ಯವಾಗಿದೆ ಎನ್ನಲಾಗಿದೆ. ಸಿಬಿಐ ತನಿಖೆಗೆ ಎಲ್ಲಾ ರೀತಿಯ ಸಹಾಯ ಮಾಡುವುದಾಗಿ ನೌಕಾದಲ ತಿಳಿಸಿದೆ. ಅಲ್ಲದೆ ಆಂತರಿಕ ತನಿಖಾ ಸಮಿತಿಯನ್ನು ರಚನೆ ಮಾಡಲಾಗಿದ್ದು ರಕ್ಷಣಾ ಮಾಹಿತಿ ಸೋರಿಕೆಯಾದುದರ ಕುರಿತು ಪರಿಶೀಲನೆ ನಡೆಸಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT