ಸಾಂದರ್ಭಿಕ ಚಿತ್ರ 
ದೇಶ

ಭಾರತ ವಿರುದ್ಧದ ಪಾಕ್ ಗೆಲುವು ಸಂಭ್ರಮಾಚರಣೆ: ರಾಜಸ್ಥಾನ ಶಿಕ್ಷಕಿ ಕೆಲಸದಿಂದ ವಜಾ

ನಫೀಸಾ ಅವರ ವಾಟ್ಸಾಪ್ ಸ್ಟೇಟಸ್ ನ ಸ್ಕ್ರೀನ್ ಶಾಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಶಾಲಾ ಆಡಳಿತದ ಗಮನಕ್ಕೂ ಬಂದಿತ್ತು.

ಜೈಪುರ: ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ವಿರುದ್ಧ ಪಾಕ್ ಗೆಲುವನ್ನು ಸಂಭ್ರಮಿಸಿದ್ದ ರಾಜಸ್ಥಾನದ ಉದಯಪುರದ ಖಾಸಗಿ ಶಾಲೆಯೊಂದರ ಶಿಕ್ಷಕಿಯನ್ನು ಕೆಲಸದಿಂದ ವಜಾ ಮಾಡಲಾಗಿದೆ.

ನಫೀಸಾ ಅಟಾರಿ ಎಂಬಾಕೆ ಅಮಾನತು ಶಿಕ್ಷೆಗೆ ಒಳಗಾದ ಶಿಕ್ಷಕಿ. ಉದಯ್ಪುರದ ನೀರಜಾ ಮೋದಿ ಖಾಸಗಿ ಶಾಲೆಯಲ್ಲಿ ಆಕೆ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. 

ಭಾನುವಾರ ನಡೆದ ಪಂದ್ಯದಲ್ಲಿ ಪಾಕ್ ವಿರುದ್ಧ ಭಾರತ ಸೋತಿದ್ದು ಕೋಟ್ಯಂತರ ಭಾರತೀಯರಿಗೆ ತೀವ್ರ ಹತಾಶೆಯುಂಟುಮಾಡಿತ್ತು. ಆದರೆ ಆ ಸಮಯದಲ್ಲಿ ನಫೀಸಾ ಅವರು 'ಜೀತ್ ಗಯಿ, ನಾವು ಗೆದ್ದೆವು' ಎಂದು ವಾಟ್ಸಾಪ್ ಸಂದೇಶ ಹಾಕಿಕೊಂಡಿದ್ದರು.

ನಫೀಸಾ ಅವರ ವಾಟ್ಸಾಪ್ ಸ್ಟೇಟಸ್ ನ ಸ್ಕ್ರೀನ್ ಶಾಟ್ ಸಾಮಾಜಿಕ ಜಾಲತಾನದಲ್ಲಿ ವೈರಲ್ ಆಗಿ, ಶಾಲಾ ಆಡಳಿತದ ಗಮನಕ್ಕೂ ಬಂದಿತ್ತು. ಈ ಬಗ್ಗೆ ಸಭೆ ನಡೆಸಿದ ಆಡಳಿತ ಮಂಡಳಿ ಆಕೆಯನ್ನು ಕೆಲಸದಿಂದ ವಜಾ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT