ಮೆಹಬೂಬಾ ಮುಫ್ತಿ 
ದೇಶ

ಭಾರತ ತಂಡದ ಸೋಲು: ಜಮ್ಮು-ಕಾಶ್ಮೀರದ ಕೆಲವೆಡೆ ಸಂಭ್ರಮ, ಕೋಪ ಏಕೆ ಎಂದ ಮೆಹಬೂಬಾ ಮುಫ್ತಿ!

ಕಳೆದ ಭಾನುವಾರ ನಡೆದ  ಟಿ-20 ವಿಶ್ವಕಪ್ ಪಂದ್ಯದಲ್ಲಿ ಭಾರತ ವಿರುದ್ಧ  ಬಾಬರ್ ನೇತೃತ್ವದ ಪಾಕ್ ತಂಡದ ಗೆಲುವನ್ನು ಜಮ್ಮು ಮತ್ತು ಕಾಶ್ಮೀರದ ಕೆಲವೆಡೆ ಸಂಭ್ರಮಿಸಲಾಯಿತು. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹಾಗೂ ಫೋಟೋಗಳನ್ನು ಅಪ್ ಲೋಡ್ ಮಾಡಿರುವ ಬಗ್ಗೆ ವರದಿಯಾಗಿದೆ. 

ಶ್ರೀನಗರ: ಕಳೆದ ಭಾನುವಾರ ನಡೆದ  ಟಿ-20 ವಿಶ್ವಕಪ್ ಪಂದ್ಯದಲ್ಲಿ ಭಾರತ ವಿರುದ್ಧ  ಬಾಬರ್ ನೇತೃತ್ವದ ಪಾಕ್ ತಂಡದ ಗೆಲುವನ್ನು ಜಮ್ಮು ಮತ್ತು ಕಾಶ್ಮೀರದ ಕೆಲವೆಡೆ ಸಂಭ್ರಮಿಸಲಾಯಿತು. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹಾಗೂ ಫೋಟೋಗಳನ್ನು ಅಪ್ ಲೋಡ್ ಮಾಡಿರುವ ಬಗ್ಗೆ ವರದಿಯಾಗಿದೆ. 

ಕೇಂದ್ರಾಡಳಿತ ಪ್ರದೇಶದಲ್ಲಿನ ಪಾಕ್ ಗೆಲುವಿನ ಸಂಭ್ರಮವನ್ನು ತೀವ್ರವಾಗಿ ಖಂಡಿಸಲಾಗುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ಬಗ್ಗೆ ಕಠಿಣ ಶಬ್ಧಗಳಲ್ಲಿ ಭಾರತೀಯರು ಟೀಕಿಸುತ್ತಿದ್ದಾರೆ. ಆದರೆ, ಈ ಸಂಭ್ರಮವನ್ನು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಸಮರ್ಥನೆ ಮಾಡಿಕೊಂಡಿದ್ದಾರೆ.

ಪಾಕಿಸ್ತಾನದ ವಿಜಯವನ್ನು ಸಂಭ್ರಮಿಸುವ ಕಾಶ್ಮೀರಿಗಳ ವಿರುದ್ಧ ನಿಮಗೆ ಏಕೆ ಇಷ್ಟೊಂದು ಕೋಪ? ಸಂತಸ ವ್ಯಕ್ತಪಡಿಸುವವರ ವಿರುದ್ಧ ಕೊಲೆ ಮಾಡುವ ಘೋಷಣೆ ಮಾಡುತ್ತಿದ್ದಾರೆ. ದೇಶ ದ್ರೋಹಿಗಳನ್ನು ಕೊಲೆ ಮಾಡಿ, ಗುಂಡಿಕ್ಕಿ ಅಂತಾ ಕರೆ ನೀಡುತ್ತಿದ್ದಾರೆ. ಆದರೆ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ಕಿತ್ತುಕೊಂಡಾಗ ಇದೇ ಜನ ಸಿಹಿ ಹಂಚಿ ಸಂಭ್ರಮಿಸಿದ್ದರು. ಕೊಲೆ ಮಾಡಿ ಅನ್ನೋ ಈಗಿನ ಜನ, ಅಂದು ಏಕೆ ಜಮ್ಮು-ಕಾಶ್ಮೀರದ ಜನರ ಪರ ನಿಲ್ಲಲಿಲ್ಲ ಅಂತಾ ಮೆಹಬೂಬಾ ಮುಫ್ತಿ ಟ್ವೀಟರ್ ನಲ್ಲಿ ಪ್ರಶ್ನೆ ಮಾಡಿದ್ದಾರೆ.

ಇದಕ್ಕೂ ಮುನ್ನ ಭಾರತೀಯ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್, ಪಟಾಕಿ ಸಿಡಿಸಿ ಪಾಕಿಸ್ತಾನದ ಗೆಲುವಿಗೆ ಸಂಭ್ರಮಿಸಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ದೀಪಾವಳಿ ಹಬ್ಬದಲ್ಲಿ ಪಟಾಕಿ ಸಿಡಿಸಲು ನಿಷೇಧ ಹೇರಲಾಗಿದೆ. ಆದರೆ, ಭಾರತದ ವಿರುದ್ಧ ಪಾಕ್ ಗೆದ್ದಾಗ ಪಟಾಕಿ ಸಿಡಿಸಲಾಗಿದೆ. ಈ ಬೂಟಾಟಿಕೆ ಏಕೆ ಅಂತಾ ವೀರೇಂದ್ರ ಸೆಹ್ವಾಗ್ ಟ್ವೀಟ್ ನಲ್ಲಿ ಕಟುವಾಗಿ ಟೀಕಿಸಿದ್ದರು.

ಈ ಮಧ್ಯೆ ಭಾರತ ಹಾಗೂ ಪಾಕಿಸ್ತಾನದ ಕ್ರಿಕೆಟ್ ಪಂದ್ಯದ ನಂತರ ಗಲಾಟೆ ನಡೆದಿರುವ ಸುದ್ದಿಗಳು ಬೆಳಕಿಗೆ ಬರುತ್ತಿವೆ. ಪಂಜಾಬ್ ನ ಸಂಗ್ರೂರ್ ಜಿಲ್ಲೆಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕೆಲ ಕಾಶ್ಮೀರಿ ವಿದ್ಯಾರ್ಥಿಗಳು ಹಾಗೂ ಯುಪಿ ಮತ್ತು ಬಿಹಾರಿ ವಿದ್ಯಾರ್ಥಿಗಳ ಮಧ್ಯೆ ಜಟಾಪಟಿ ನಡೆದಿರುವ ಬಗ್ಗೆಯೂ ವರದಿಯಾಗಿದೆ. ಪಂದ್ಯ ಮುಕ್ತಾಯವಾದ ನಂತರ ದೇಶ ವಿರೋಧಿ ಘೋಷಣೆಗಳನ್ನು ಕೆಲ ವಿದ್ಯಾರ್ಥಿಗಳು ಕೂಗಿದರು. ಇದು ಗಲಾಟೆಗೆ ಕಾರಣವಾಯಿತು ಅಂತಾ ಪಂಜಾಬ್ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT