ಕೇರದಳದಲ್ಲಿ ಗರ್ಭಿಣಿಯರಿಗೆ ಕೊರೋನಾ ಸೋಂಕು (ಸಂಗ್ರಹ ಚಿತ್ರ) 
ದೇಶ

ಕೋವಿಡ್-19: ಕೇರಳದಲ್ಲಿ 41 ಗರ್ಭಿಣಿಯರ ಸಾವು, 149 ಸೋಂಕಿತರ ಆತ್ಮಹತ್ಯೆ

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ಕೇರದಳಲ್ಲಿ 41 ಮಂದಿ ಗರ್ಭಿಣಿಯರು ಸಾವನ್ನಪ್ಪಿದ್ದಾರೆ ಎಂದು ಕೇರಳ ಸರ್ಕಾರ ಹೇಳಿದೆ.

ತಿರುವನಂತಪುರಂ: ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ಕೇರದಳಲ್ಲಿ 41 ಮಂದಿ ಗರ್ಭಿಣಿಯರು ಸಾವನ್ನಪ್ಪಿದ್ದಾರೆ ಎಂದು ಕೇರಳ ಸರ್ಕಾರ ಹೇಳಿದೆ.

ಈ ಬಗ್ಗೆ ಕೇರಳ ಆರೋಗ್ಯ ಸಚಿವ ವೀಣಾ ಜಾರ್ಜ್ ಬುಧವಾರ ಮಾಹಿತಿ ನೀಡಿದ್ದು, 'ಮಾರ್ಚ್ 2020 ರಿಂದ ಕೇರಳದಲ್ಲಿ ಇದುವರೆಗೆ 41 ಗರ್ಭಿಣಿಯರು ಕೋವಿಡ್-19 ಗೆ ಬಲಿಯಾಗಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು, 'ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಕೋವಿಡ್ ಪಾಸಿಟಿವ್ ವ್ಯಕ್ತಿಗಳ ಸಂಖ್ಯೆ 149 ರಷ್ಟಿದೆ. ಅಂತೆಯೇ ಕೇರಳ ರಾಜ್ಯ ಆರೋಗ್ಯ ಇಲಾಖೆಯು ಇತ್ತೀಚೆಗೆ ನಡೆಸಿದ ಸಿರೊ ಪ್ರೆವೆಲೆನ್ಸ್ ವೈಜ್ಞಾನಿಕ ಅಧ್ಯಯನದ ಸಂಶೋಧನೆಗಳು ಮತ್ತು ಐಸಿಎಂಆರ್‌ನ ಇದೇ ರೀತಿಯ ಸಮೀಕ್ಷೆಗಳಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ತೋರುತ್ತದೆ ಎಂದು ಮಾಹಿತಿ ನೀಡಿದರು.

ಇನ್ನು ಕೇರಳದಲ್ಲಿ ನಿನ್ನೆ ಮತ್ತೆ 7ಸಾವಿರಕ್ಕೂ ಅಧಿಕ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ನಿನ್ನೆ ಒಂದೇ ದಿನ 482 ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದಾರೆ. ಆ ಮೂಲಕ ಕೇರದಳಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 49,19,952ಕ್ಕೆ ಏರಿಕೆಯಾಗಿದ್ದು, ಕೋವಿಡ್ ನಿಂದಾಗಿ ಬಲಿಯಾದವರ ಸಂಖ್ಯೆ 29,355ಕ್ಕೆ ಏರಿಕೆಯಾಗಿದೆ. 

ನಿನ್ನೆ ವರದಿಯಾದ 482 ಮಂದಿ ಸಾವಿನ ಪೈಕಿ 90 ಸಾವು ನಿನ್ನೆ ವರದಿಯಾಗಿದ್ದು, ಬಾಕಿ 341 ಸಾವುಗಳ ತಾಂತ್ರಿಕ ಕಾರಣಗಳಿಂದ ಜೂನ್ 18 ರಿಂದ ದಾಖಲಾಗದೇ ಉಳಿದಿದ್ದ ಸಾವಿನ ಪ್ರಕರಣಗಳಾಗಿವೆ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT