ಅಖಿಲೇಶ್ ಯಾದವ್ 
ದೇಶ

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ: ಸಮಾಜವಾದಿ ಪಕ್ಷ- ಎಸ್‌ಬಿಎಸ್‌ಪಿ ಮೈತ್ರಿ ಘೋಷಣೆ

ಸಮಾಜವಾದಿ ಪಕ್ಷ ಮತ್ತು ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷ(ಎಸ್‌ಬಿಎಸ್‌ಪಿ) 2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮೈತ್ರಿ ಮಾಡಿಕೊಳ್ಳುವುದಾಗಿ ಬುಧವಾರ ಪ್ರಕಟಿಸಿದೆ...

ಲಖನೌ: ಸಮಾಜವಾದಿ ಪಕ್ಷ ಮತ್ತು ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷ(ಎಸ್‌ಬಿಎಸ್‌ಪಿ) 2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮೈತ್ರಿ ಮಾಡಿಕೊಳ್ಳುವುದಾಗಿ ಬುಧವಾರ ಪ್ರಕಟಿಸಿದೆ ಮತ್ತು ರಾಜ್ಯದಿಂದ ಬಿಜೆಪಿಯನ್ನು "ಓಡಿಸಲು" 'ಖಡೇದ ಹೋವೇ' ಎಂಬ ಘೋಷಣೆ ನೀಡಿದೆ.

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷವು ಬಿಜೆಪಿಯನ್ನು ಸೋಲಿಸಿ ಸತತ ಮೂರನೇ ಅವಧಿಗೆ ಮತ್ತೆ ಅಧಿಕಾರಕ್ಕೆ ಬಂದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ 'ಖೇಲಾ ಹೋಬೆ' (ಗೇಮ್ ಆನ್) ಘೋಷಣೆ ಮಾದರಿಯಲ್ಲಿ ಉತ್ತರ ಪ್ರದೇಶದಲ್ಲೂ ಬಿಜೆಪಿಯನ್ನು "ಓಡಿಸಲು" ಸಮಾಜವಾದಿ ಪಕ್ಷ-ಎಸ್‌ಬಿಎಸ್‌ಪಿ ಮೈತ್ರಿ 'ಖಡೇದ ಹೌವೇ' ಎಂಬ ಘೋಷಣೆ ಮಾಡಿದೆ.

"ಪಶ್ಚಿಮ ಬಂಗಾಳದಲ್ಲಿ 'ಖೇಲಾ ಹೋಬೆ' ಎಂಬ ಘೋಷಣೆ ಮೂಲಕ 'ದೀದಿ' ಬಿಜೆಪಿಯನ್ನು ರಾಜ್ಯದಿಂದ ಹೊರಹಾಕಿದರು. ಅದೇ ರೀತಿ ಉತ್ತರ ಪ್ರದೇಶದಲ್ಲೂ 'ಖಡೇದ ಹೋವೇ' ಎಂಬ ಘೋಷಣೆ  ಮೂಲಕ ಬಿಜೆಪಿ ಸರ್ಕಾರವನ್ನು ಜನರ ಕಿತ್ತುಹಾಕಲಿದ್ದಾರೆ ಎಂದು ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷದ(ಎಸ್‌ಬಿಎಸ್‌ಪಿ) ಅಧ್ಯಕ್ಷ ಓಂ ಪ್ರಕಾಶ್ ರಾಜ್‌ಭರ್ ಅವರು ಹೇಳಿದ್ದಾರೆ.

'ವಂಚಿತ್, ಪಿಚ್ಡಾ, ದಲಿತ ಮತ್ತು ಅಲ್ಪಸಂಖ್ಯಾತ ಭಾಗಿದಾರಿ ಮಹಾಪಂಚಾಯತ್' ನಲ್ಲಿ ಸಮಾಜವಾದಿ ಪಕ್ಷದ(ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ವಿಧಾನಸಭೆ ಚುನಾವಣೆಗೆ ಎರಡು ಪಕ್ಷಗಳ ನಡುವಿನ ಮೈತ್ರಿಯನ್ನು ಘೋಷಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT