ಸಾಂದರ್ಭಿಕ ಚಿತ್ರ 
ದೇಶ

ಟಿ20 ವಿಶ್ವಕಪ್: ಭಾರತ ವಿರುದ್ಧ ಪಾಕಿಸ್ತಾನ ಗೆಲುವನ್ನು ಸಂಭ್ರಮಿಸಿದ ಕಾಶ್ಮೀರದ ಮೂವರು ವಿದ್ಯಾರ್ಥಿಗಳು ಆಗ್ರಾದಲ್ಲಿ ಬಂಧನ 

ಕಳೆದ 24ರಂದು ನಡೆದ ಟಿ20 ವಿಶ್ವಕಪ್ ನಲ್ಲಿ ಭಾರತ ವಿರುದ್ಧ ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದ ಕಾಶ್ಮೀರದ ಮೂವರು ವಿದ್ಯಾರ್ಥಿಗಳನ್ನು ಆಗ್ರಾ ಪೊಲೀಸರು ಬಂಧಿಸಿದ್ದಾರೆ. ಈ ವಿದ್ಯಾರ್ಥಿಗಳು ಪಾಕಿಸ್ತಾನ ಸೋಷಿಯಲ್ ಮೀಡಿಯಾಗಳಲ್ಲಿ ಭಾರತ ವಿರುದ್ಧ ಸಂದೇಶಗಳನ್ನು ಹಾಕುತ್ತಿದ್ದರು ಎಂದು ಸಹ ಪೊಲೀಸರು ಹೇಳಿದ್ದಾರೆ.

ಆಗ್ರಾ: ಕಳೆದ 24ರಂದು ನಡೆದ ಟಿ20 ವಿಶ್ವಕಪ್ ನಲ್ಲಿ ಭಾರತ ವಿರುದ್ಧ ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದ ಕಾಶ್ಮೀರದ ಮೂವರು ವಿದ್ಯಾರ್ಥಿಗಳನ್ನು ಆಗ್ರಾ ಪೊಲೀಸರು ಬಂಧಿಸಿದ್ದಾರೆ. ಈ ವಿದ್ಯಾರ್ಥಿಗಳು ಪಾಕಿಸ್ತಾನ ಸೋಷಿಯಲ್ ಮೀಡಿಯಾಗಳಲ್ಲಿ ಭಾರತ ವಿರುದ್ಧ ಸಂದೇಶಗಳನ್ನು ಹಾಕುತ್ತಿದ್ದರು ಎಂದು ಸಹ ಪೊಲೀಸರು ಹೇಳಿದ್ದಾರೆ.

ಬಂಧಿತ ಮೂವರು ಕಾಶ್ಮೀರ ವಿದ್ಯಾರ್ಥಿಗಳನ್ನು ಇನಾಯತ್ ಅಲ್ತಫ್ ಶೈಖ್, ಶೌಕತ್ ಅಹ್ಮದ್ ಗನಿ ಮತ್ತು ಅರ್ಶಿದ್ ಯೂಸಫ್ ಎಂದು ಗುರುತಿಸಲಾಗಿದೆ ಎಂದು ಆಗ್ರಾ ಎಸ್ಪಿ ವಿಕಾಸ್ ಕುಮಾರ್ ತಿಳಿಸಿದ್ದಾರೆ. ಈ ಮೂವರು ವಿದ್ಯಾರ್ಥಿಗಳು ಬಿಚ್ಪುರಿಯ ಆರ್ ಬಿಎಸ್ ಕಾಲೇಜಿನಲ್ಲಿ ಅಧ್ಯಯನ ನಡೆಸುತ್ತಿದ್ದಾರೆ.

ವಿದ್ಯಾರ್ಥಿಗಳನ್ನು ಸೆಕ್ಷನ್ 153 (ಎ) (ಅಸಮಾನತೆಯನ್ನು ಉತ್ತೇಜಿಸುವುದು), ಮತ್ತು 505 (ವದಂತಿ ಅಥವಾ ಆತಂಕಕಾರಿ ಸುದ್ದಿಗಳನ್ನು ಒಳಗೊಂಡ ಹೇಳಿಕೆ ಅಥವಾ ವರದಿಯನ್ನು ಪ್ರಕಟಿಸುವುದು ಮತ್ತು ಪ್ರಸಾರ ಮಾಡುವುದು) ಅಡಿಯಲ್ಲಿ ಬಂಧಿಸಲಾಗಿದೆ.ಹೆಚ್ಚಿನ ವಿಚಾರಣೆ ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT