ಕ್ಯಾ.ಅಮರಿಂದರ್ ಸಿಂಗ್ 
ದೇಶ

ಬಿಜೆಪಿ ಮತ್ತು ಬಂಡಾಯ ಅಕಾಲಿ ನಾಯಕರೊಂದಿಗೆ ಮೈತ್ರಿಗೆ ಮುಕ್ತ: ಪಕ್ಷ ರಚನೆ ಘೋಷಣೆ ನಂತರ ಕ್ಯಾ.ಅಮರಿಂದರ್ ಸಿಂಗ್ ಹೇಳಿಕೆ

ಹೊಸ ಪಕ್ಷ ರಚನೆಯಾದ ಕೂಡಲೇ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಮತ್ತು ಶಿರೋಮಣಿ ಅಕಾಲಿ ದಳದ ಬಂಡಾಯರ ಜೊತೆಗೆ ಸೀಟು ಹಂಚಿಕೆ ವಿಚಾರದಲ್ಲಿ ಮುಕ್ತನಾಗಿದ್ದೇನೆ ಎಂದು ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾ.ಅಮರಿಂದರ್ ಸಿಂಗ್ ಹೇಳಿದ್ದಾರೆ.

ಚಂಡೀಗಢ: ಹೊಸ ಪಕ್ಷ ರಚನೆಯಾದ ಕೂಡಲೇ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಮತ್ತು ಶಿರೋಮಣಿ ಅಕಾಲಿ ದಳದ ಬಂಡಾಯರ ಜೊತೆಗೆ ಸೀಟು ಹಂಚಿಕೆ ವಿಚಾರದಲ್ಲಿ ಮುಕ್ತನಾಗಿದ್ದೇನೆ ಎಂದು ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾ.ಅಮರಿಂದರ್ ಸಿಂಗ್ ಹೇಳಿದ್ದಾರೆ.

ಬಿಜೆಪಿ ಜೊತೆ ಮೈತ್ರಿ ಕುರಿತು ತಾವು ಯಾವಾಗಲೂ ಮಾತನಾಡಿಯೇ ಇಲ್ಲ ಎಂದಿರುವ ಅವರು, ಸೀಟು ಹಂಚಿಕೆ ಮಾಡಿಕೊಳ್ಳಲು ತಮಗೆ ಇಚ್ಛೆಯಿದೆ ಎಂದಿದ್ದಾರೆ. ಶಿರೋಮಣಿ ಅಕಾಲಿ ದಳ ಜೊತೆ ಕೂಡ ಮೈತ್ರಿ ಮಾಡಿಕೊಳ್ಳುವ ಉದ್ದೇಶವಿಲ್ಲ ಆದರೆ ಬಂಡಾಯ ನಾಯಕರ ಜೊತೆ ಸೀಟು ಹಂಚಿಕೆ ಮಾಡಿಕೊಳ್ಳಲು ಇಚ್ಛೆಯಿದೆ ಎಂದಿದ್ದಾರೆ.

ಪಂಜಾಬ್ ನಲ್ಲಿ ಈಗ ಕಾಂಗ್ರೆಸ್ ಎಲ್ಲಿಯೂ ಅಸ್ತಿತ್ವದಲ್ಲಿಲ್ಲ, ತಮ್ಮ ಹೋರಾಟ ಕೇವಲ ಶಿರೋಮಣಿ ಅಕಾಲಿ ದಳದ ಜೊತೆಗೆ ಮಾತ್ರ ಎಂದರು. ಕ್ಷುಲ್ಲಕ ಕಾರಣಕ್ಕೆ ತಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರಾದ ನವಜೋತ್ ಸಿಂಗ್ ಸಿಧು ಮತ್ತು ಸುಖಿಂದರ್ ರಾಂಧವ ಜೊತೆ ಹರಿಹಾಯ್ದರು. 

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಿಧು ಅವರು ಎಲ್ಲೇ ಸ್ಪರ್ಧಿಸಿದರೂ ನಾವು ಅವರ ವಿರುದ್ಧ ಸ್ಪರ್ಧಿಸಿ ಅವರನ್ನು ಸೋಲಿಸುತ್ತೇವೆ ಎಂದು ಅವರು ಪ್ರತಿಜ್ಞೆ ಮಾಡಿದರು, ಪಂಜಾಬ್ ನಲ್ಲಿ ಜನಪ್ರಿಯತೆ ಶೇಕಡಾ 25ರಷ್ಟು ಕಡಿಮೆಯಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT