ಸುಪ್ರೀಂಕೋರ್ಟ್ 
ದೇಶ

2021ನೇ ಸಾಲಿನ ನೀಟ್ ಫಲಿತಾಂಶ ಪ್ರಕಟಿಸಲು ಸುಪ್ರೀಂ ಕೋರ್ಟ್ ಅನುಮತಿ

ದೇಶಾದ್ಯಂತ ಪದವಿಪೂರ್ವ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ 2021ನೇ ಸಾಲಿನ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್)ಯ ಫಲಿತಾಂಶ ಪ್ರಕಟಿಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ..

ನವದೆಹಲಿ: ದೇಶಾದ್ಯಂತ ಪದವಿಪೂರ್ವ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ 2021ನೇ ಸಾಲಿನ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್)ಯ ಫಲಿತಾಂಶ ಪ್ರಕಟಿಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ)ಗೆ ಸುಪ್ರೀಂ ಕೋರ್ಟ್ ಗುರುವಾರ ಅನುಮತಿ ನೀಡಿದೆ.

ನ್ಯಾಯಮೂರ್ತಿಗಳಾದ ಎಲ್ ನಾಗೇಶ್ವರ ರಾವ್, ಸಂಜೀವ್ ಖನ್ನಾ ಮತ್ತು ಬಿಆರ್ ಗವಾಯಿ ಅವರನ್ನೊಳಗೊಂಡ ಸುಪ್ರೀಂ ಪೀಠಕ, ಎನ್‌ಟಿಎಗೆ ನೀಟ್ ಫಲಿತಾಂಶ ಪ್ರಕಟಿಸದಂತೆ ಮತ್ತು ಪರೀಕ್ಷಾ ಕೇಂದ್ರದಲ್ಲಿ ಪ್ರಶ್ನೆ ಪತ್ರಿಕೆಗಳು ಮತ್ತು ಒಎಂಆರ್ ಶೀಟ್‌ಗಳು ಮಿಶ್ರಣಗೊಂಡ ಇಬ್ಬರು ಆಕಾಂಕ್ಷಿಗಳಿಗೆ ಮರು ಪರೀಕ್ಷೆ ನಡೆಸುವಂತೆ ಬಾಂಬೆ ಹೈಕೋರ್ಟ್‌ ಇತ್ತೀಚಿಗೆ ನೀಡಿದ್ದ ಆದೇಶಕ್ಕೆ ತಡೆ ನೀಡಿದೆ.

"ನಾವು ಹೈಕೋರ್ಟ್ ತೀರ್ಪಿಗೆ ತಡೆ ನೀಡುತ್ತೇವೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಫಲಿತಾಂಶವನ್ನು ಪ್ರಕಟಿಸಬಹುದು" ಎಂದು ಎನ್‌ಟಿಎ ಪರವಾಗಿ ವಾದಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಸುಪ್ರೀಂ ಪೀಠ ತಿಳಿಸಿದೆ.

ದೀಪಾವಳಿ ರಜೆಯ ನಂತರ ಈ ಇಬ್ಬರು ವಿದ್ಯಾರ್ಥಿಗಳ ಬಗ್ಗೆ ತೀರ್ಮಾನಿಸುತ್ತೇವೆ. ಅಷ್ಟರಲ್ಲಿ ಈ ಕುರಿತು ಸಂಬಂಧಿಸಿದವರಿಗೆ ಪ್ರತಿಕ್ರಿಯಿಸಲು ನೋಟಿಸ್‌ ಜಾರಿ ಮಾಡುತ್ತೇವೆ. ಈ ಇಬ್ಬರಿಗಾಗಿ ನಾವು 16 ಲಕ್ಷ ವಿದ್ಯಾರ್ಥಿಗಳ ಫಲಿತಾಂಶವನ್ನು ಹಿಡಿದಿಟ್ಟುಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಮಹಾರಾಷ್ಟ್ರದ ಇಬ್ಬರು ಪರೀಕ್ಷಾರ್ಥಿಗಳಾದ ವೈಶಾನವಿ ಭೋಪಾಲಿ ಮತ್ತು ಅಭಿಷೇಕ್ ಶಿವಾಜಿ ಅವರ ಪ್ರಶ್ನೆ ಪತ್ರಿಕೆಗಳು ಮತ್ತು ಒಎಂಆರ್‌ ಪ್ರತಿಗಳು ಪರೀಕ್ಷೆಗೂ ಮುನ್ನಾ ಪರೀಕ್ಷಾ ಕೇಂದ್ರದಲ್ಲಿ ಬೆರೆತು ಹೋಗಿದ್ದವು. ಹೀಗಾಗಿ ಅವರಿಗೆ ಮತ್ತೊಮ್ಮೆ ಅವಕಾಶ ಕೊಡಬೇಕು. ಈ ಇಬ್ಬರ ಪರೀಕ್ಷಾ ಫಲಿತಾಂಶವನ್ನು ಸೆಪ್ಟೆಂಬರ್‌ 12ರಂದು ನಡೆಸಿದ ಪರೀಕ್ಷೆಯ ಫಲಿತಾಂಶದ ಜತೆಗೇ ಪ್ರಕಟಿಸಬೇಕು ಎಂದು ಹೈಕೋರ್ಟ್‌ ಆದೇಶಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT