ಡಿಕ್ಕಿ ಹೊಡೆದ ಟ್ರಕ್ 
ದೇಶ

ಹರ್ಯಾಣದ ಟಿಕ್ರಿ ಗಡಿಭಾಗದಲ್ಲಿ ಭೀಕರ ಅಪಘಾತ: ಮೂವರು ರೈತ ಮಹಿಳೆಯರು ಸಾವು, ಇಬ್ಬರಿಗೆ ಗಾಯ 

ಹರ್ಯಾಣ ರಾಜ್ಯದ ಬಹದುರ್ಗರ್ ನ ಟಿಕ್ರಿ ಗಡಿಭಾಗದಲ್ಲಿ ಗುರುವಾರ ನಸುಕಿನ ಜಾವ ಟ್ರಕ್ ಢಿಕ್ಕಿ ಹೊಡೆದು ಮೂವರು ರೈತ ಮಹಿಳೆಯರು ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ನಡೆದಿದೆ.

ಬಹದುರ್ಗರ್: ಹರ್ಯಾಣ ರಾಜ್ಯದ ಬಹದುರ್ಗರ್ ನ ಟಿಕ್ರಿ ಗಡಿಭಾಗದಲ್ಲಿ ಗುರುವಾರ ನಸುಕಿನ ಜಾವ ಟ್ರಕ್ ಢಿಕ್ಕಿ ಹೊಡೆದು ಮೂವರು ರೈತ ಮಹಿಳೆಯರು ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ನಡೆದಿದೆ.

ರೈತ ಮಹಿಳೆಯರು ಆಟೋರಿಕ್ಷಾಕ್ಕೆ ಬಹದುರ್ಗರ್ ರೈಲ್ವೆ ನಿಲ್ದಾಣಕ್ಕೆ ಹೋಗಲು ಕಾಯುತ್ತಿದ್ದ ವೇಳೆ ಪಕೊಡಾ ಚೌಕ್ ನಲ್ಲಿ ಈ ಅಪಘಾತ ನಡೆದಿದೆ. 

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ಟಿಕ್ರಿ ಗಡಿಭಾಗದಲ್ಲಿ ಪ್ರತಿಭಟನೆ ನಡೆಸಿ ರೈತ ಮಹಿಳೆಯರು ತಮ್ಮ ಊರಿಗೆ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. 

ಮೃತಪಟ್ಟವರನ್ನು 60 ವರ್ಷದ ಛಿಂದರ್ ಕೌರ್, 58 ವರ್ಷದ ಅಮರ್ಜೀತ್ ಕೌರ್ ಮತ್ತು 60 ವರ್ಷದ ಗುರ್ಮೈಲ್ ಕೌರ್ ಎಂದು ಗುರುತಿಸಲಾಗಿದೆ. ಇವರು ಪಂಜಾಬ್ ನ ಮಾನ್ಸ ಜಿಲ್ಲೆಯ ದ್ಯಾಲುವಾಲ ಗ್ರಾಮಕ್ಕೆ ಸೇರಿದವರಾಗಿದ್ದಾರೆ. 

ಗಾಯಗೊಂಡವರನ್ನು ಕೂಡಲೇ ಪಿಜಿಐ ರೊಹ್ಟಕ್ ಕೆ ದಾಖಲಿಸಲಾಗಿದೆ. ದೆಹಲಿಯ ಹೊರವಲಯದಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿ ನೂರಾರು ಮಹಿಳೆಯರು ಕೂಡ ಭಾಗವಹಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT