ಡಿಕ್ಕಿ ಹೊಡೆದ ಟ್ರಕ್ 
ದೇಶ

ಹರ್ಯಾಣದ ಟಿಕ್ರಿ ಗಡಿಭಾಗದಲ್ಲಿ ಭೀಕರ ಅಪಘಾತ: ಮೂವರು ರೈತ ಮಹಿಳೆಯರು ಸಾವು, ಇಬ್ಬರಿಗೆ ಗಾಯ 

ಹರ್ಯಾಣ ರಾಜ್ಯದ ಬಹದುರ್ಗರ್ ನ ಟಿಕ್ರಿ ಗಡಿಭಾಗದಲ್ಲಿ ಗುರುವಾರ ನಸುಕಿನ ಜಾವ ಟ್ರಕ್ ಢಿಕ್ಕಿ ಹೊಡೆದು ಮೂವರು ರೈತ ಮಹಿಳೆಯರು ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ನಡೆದಿದೆ.

ಬಹದುರ್ಗರ್: ಹರ್ಯಾಣ ರಾಜ್ಯದ ಬಹದುರ್ಗರ್ ನ ಟಿಕ್ರಿ ಗಡಿಭಾಗದಲ್ಲಿ ಗುರುವಾರ ನಸುಕಿನ ಜಾವ ಟ್ರಕ್ ಢಿಕ್ಕಿ ಹೊಡೆದು ಮೂವರು ರೈತ ಮಹಿಳೆಯರು ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ನಡೆದಿದೆ.

ರೈತ ಮಹಿಳೆಯರು ಆಟೋರಿಕ್ಷಾಕ್ಕೆ ಬಹದುರ್ಗರ್ ರೈಲ್ವೆ ನಿಲ್ದಾಣಕ್ಕೆ ಹೋಗಲು ಕಾಯುತ್ತಿದ್ದ ವೇಳೆ ಪಕೊಡಾ ಚೌಕ್ ನಲ್ಲಿ ಈ ಅಪಘಾತ ನಡೆದಿದೆ. 

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ಟಿಕ್ರಿ ಗಡಿಭಾಗದಲ್ಲಿ ಪ್ರತಿಭಟನೆ ನಡೆಸಿ ರೈತ ಮಹಿಳೆಯರು ತಮ್ಮ ಊರಿಗೆ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. 

ಮೃತಪಟ್ಟವರನ್ನು 60 ವರ್ಷದ ಛಿಂದರ್ ಕೌರ್, 58 ವರ್ಷದ ಅಮರ್ಜೀತ್ ಕೌರ್ ಮತ್ತು 60 ವರ್ಷದ ಗುರ್ಮೈಲ್ ಕೌರ್ ಎಂದು ಗುರುತಿಸಲಾಗಿದೆ. ಇವರು ಪಂಜಾಬ್ ನ ಮಾನ್ಸ ಜಿಲ್ಲೆಯ ದ್ಯಾಲುವಾಲ ಗ್ರಾಮಕ್ಕೆ ಸೇರಿದವರಾಗಿದ್ದಾರೆ. 

ಗಾಯಗೊಂಡವರನ್ನು ಕೂಡಲೇ ಪಿಜಿಐ ರೊಹ್ಟಕ್ ಕೆ ದಾಖಲಿಸಲಾಗಿದೆ. ದೆಹಲಿಯ ಹೊರವಲಯದಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿ ನೂರಾರು ಮಹಿಳೆಯರು ಕೂಡ ಭಾಗವಹಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT