ವಿದ್ಯಾರ್ಥಿಯನ್ನು ತಲೆಕೆಳಗೆ ಮಾಡಿ ನೇತಾಡಿಸಿದ ಪ್ರಾಂಶುಪಾಲ 
ದೇಶ

ಉತ್ತರ ಪ್ರದೇಶ: ಚೇಷ್ಟೆ ಮಾಡಿದ್ದಕ್ಕೆ ವಿದ್ಯಾರ್ಥಿಯನ್ನು ತಲೆಕೆಳಗೆ ಮಾಡಿ ನೇತಾಡಿಸಿದ ಪ್ರಾಂಶುಪಾಲ!

ಖಾಸಗಿ ಶಾಲೆಯ ಪ್ರಾಂಶುಪಾಲರೊಬ್ಬರು ಕಟ್ಟಡದ ಮೊದಲ ಮಹಡಿಯಲ್ಲಿ ವಿದ್ಯಾರ್ಥಿಯೋರ್ವನ ಕಾಲನ್ನು ಮೇಲಕ್ಕೆ ಎತ್ತಿ ತೆಲೆಕೆಳಗೆ ಮಾಡಿ, ನೇತಾಡಿಸಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ.

ಲಖನೌ: ಖಾಸಗಿ ಶಾಲೆಯ ಪ್ರಾಂಶುಪಾಲರೊಬ್ಬರು ಕಟ್ಟಡದ ಮೊದಲ ಮಹಡಿಯಲ್ಲಿ ವಿದ್ಯಾರ್ಥಿಯೋರ್ವನ ಕಾಲನ್ನು ಮೇಲಕ್ಕೆ ಎತ್ತಿ ತೆಲೆಕೆಳಗೆ ಮಾಡಿ, ನೇತಾಡಿಸಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ.

ಫೋಟೋ ವೈರಲ್​ ಆಗುತ್ತಿದ್ದಂತೆ ಉತ್ತರ ಪ್ರದೇಶದ ಮಿರ್ಜಾಪುರದ ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರಾಂಶುಪಾಲರ ವಿರುದ್ಧ ದೂರು ದಾಖಲಿಸುವಂತೆ ಆದೇಶಿಸಿದ್ದಾರೆ. ಎರಡನೇ ತರಗತಿ ಮಗು ಚೇಷ್ಟೆ ಮಾಡಿದ್ದಕ್ಕೆ ಅಕ್ಟೋಬರ್ 28ರಂದು ಪ್ರಾಂಶುಪಾಲರು ಈ ಶಿಕ್ಷೆಯನ್ನು ವಿಧಿಸಿದ್ದಾರೆ.

ಅಹ್ರೌರಾದ ಸದ್ಭಾವನಾ ಶಿಕ್ಷಣ ಸಂಸ್ಥಾನ ಜೂನಿಯರ್ ಹೈಸ್ಕೂಲ್ ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯ ಪ್ರಾಂಶುಪಾಲ ಮನೋಜ್ ವಿಶ್ವಕರ್ಮ ಅವರು 2ನೇ ತರಗತಿ ವಿದ್ಯಾರ್ಥಿ ಸೋನು ಯಾದವ್ ಊಟ ಮಾಡುವಾಗ ಇತರ ಮಕ್ಕಳೊಂದಿಗೆ ಕೀಟಲೆ ಮಾಡಿದ್ದಕ್ಕೆ ಕೋಪಗೊಂಡಿದ್ದಾರೆ. ಬಳಿಕ ಮಗುವಿನ ಒಂದು ಕಾಲನ್ನು ಮೇಲಕ್ಕೆ ಎತ್ತಿ ತೆಲೆಕೆಳಗಾಗಿ ಮಾಡಿ ಮಗುವಿಗೆ ಬುದ್ಧಿಯನ್ನು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT