ನರೇಂದ್ರ ಮೋದಿ 
ದೇಶ

ನ. 5ರಂದು ಕೇದಾರನಾಥಕ್ಕೆ ಮೋದಿ ಭೇಟಿ: ಶಂಕರಾಚಾರ್ಯರ ಸಮಾಧಿ ಉದ್ಘಾಟನೆ

ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 5 ರಂದು ಉತ್ತರಾಖಂಡದ ಕೇದಾರನಾಥಕ್ಕೆ ಭೇಟಿ ನೀಡಲಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ನವದೆಹಲಿ:  ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 5 ರಂದು ಉತ್ತರಾಖಂಡದ ಕೇದಾರನಾಥಕ್ಕೆ ಭೇಟಿ ನೀಡಲಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಕೇದಾರನಾಥ ದೇವಾಲಯದಲ್ಲಿ ಪ್ರಧಾನಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ನಂತರ ಶ್ರೀ ಆದಿ ಶಂಕರಾಚಾರ್ಯ ಸಮಾಧಿ ಉದ್ಘಾಟನೆ ಮತ್ತು ಶ್ರೀ ಆದಿ ಶಂಕರಾಚಾರ್ಯರ ಪ್ರತಿಮೆ ಅನಾವರಣಗೊಳಿಸಲಿದ್ದಾರೆ. 2013 ರ ಪ್ರವಾಹದಲ್ಲಿ ನಾಶವಾದ ನಂತರ ಸಮಾಧಿಯನ್ನು ಪುನರ್ನಿರ್ಮಿಸಲಾಯಿತು.

ವಿಧಾನಸಭೆ ಚುನಾವಣೆ ನಡೆಯಲಿರುವ ಉತ್ತರಾಖಂಡ ರಾಜ್ಯದಲ್ಲಿ ರ್‍ಯಾಲಿಯನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ. 130 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದ ಪೂರ್ಣಗೊಂಡಿರುವ ಪ್ರಮುಖ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.

ಸಂಗಮ ಘಾಟ್, ಪ್ರಥಮ ಚಿಕಿತ್ಸಾ ಮತ್ತು ಪ್ರವಾಸಿ ಸೌಲಭ್ಯ ಕೇಂದ್ರ, ಆಡಳಿತ ಕಚೇರಿ ಮತ್ತು ಆಸ್ಪತ್ರೆ, ಎರಡು ಅತಿಥಿ ಗೃಹಗಳು, ಪೊಲೀಸ್ ಠಾಣೆ, ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್, ಮಂದಾಕಿನಿ ಆಸ್ಥಾಪತ್ ಸೇರಿದಂತೆ 180 ಕೋಟಿ ರೂ.ಗಳ ಬಹುವಿಧದ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಪ್ರಧಾನಿ ಸಚಿವಾಲಯ ತಿಳಿಸಿದೆ.

ಸಮಾಧಿಯ ಮರುನಿರ್ಮಾಣವನ್ನು ಉಲ್ಲೇಖಿಸಿರುವ ಪಿಎಂಒ, ಮೋದಿ ಅವರ ಮಾರ್ಗದರ್ಶನದಲ್ಲಿ ಸಂಪೂರ್ಣ ಕೆಲಸವನ್ನು ಕೈಗೊಳ್ಳಲಾಗಿದ್ದು, ಅವರು ನಿರಂತರವಾಗಿ ಅದರ ಪ್ರಗತಿಯನ್ನು ಪರಿಶೀಲಿಸಿದ್ದಾರೆ ಮತ್ತು ಮೇಲ್ವಿಚಾರಣೆ ಮಾಡಿದ್ದಾರೆ ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel