ಕಿರಣ್ ಗೋಸಾವಿ 
ದೇಶ

ಎನ್ ಸಿಬಿ ಸಾಕ್ಷಿ ಗೋಸಾವಿ ವಿರುದ್ಧ ಹೊಸ ವಂಚನೆ ಪ್ರಕರಣ

ಮುಂಬೈ ನ ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣದ ಪ್ರಮುಖ ಸಾಕ್ಷಿ ಕಿರಣ್ ಗೋಸಾವಿ ವಿರುದ್ಧ ಪುಣೆ ಪೊಲೀಸರು ವಂಚನೆಗೆ ಸಂಬಂಧಿಸಿದ ಹೊಸ ಪ್ರಕರಣವೊಂದನ್ನು ದಾಖಲಿಸಿದ್ದಾರೆ. 

ಮುಂಬೈ: ಮುಂಬೈ ನ ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣದ ಪ್ರಮುಖ ಸಾಕ್ಷಿ ಕಿರಣ್ ಗೋಸಾವಿ ವಿರುದ್ಧ ಪುಣೆ ಪೊಲೀಸರು ವಂಚನೆಗೆ ಸಂಬಂಧಿಸಿದ ಹೊಸ ಪ್ರಕರಣವೊಂದನ್ನು ದಾಖಲಿಸಿದ್ದಾರೆ. 

"ವ್ಯಕ್ತಿಯೋರ್ವ ಕಿರಣ್ ಗೋಸಾವಿ ವಿರುದ್ಧ ಇಂತಹ ಆರೋಪ ಮಾಡಿದ್ದಾರೆ" ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರತ್ಯೇಕ ಪ್ರಕರಣ ವಾನಾವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗೋಸಾವಿ ಫರಸ್ಖಾನ ಪೊಲೀಸ್ ಠಾಣೆಯ ಅಧಿಕಾರಿಗಳು ಗೋಸಾವಿಯನ್ನು 2018 ರ ಪ್ರಕರಣವೊಂದರಲ್ಲಿ ಗುರುವಾರ ಬಂಧಿಸಿದ್ದರು.

ಉದ್ಯೋಗಕ್ಕೆ ಸಂಬಂಧಿಸಿದಂತೆ ಇಬ್ಬರಿಗೆ ಭರವಸೆ ನೀಡಿ ವಂಚನೆ ಮಾಡಿದ್ದರು. ಈ ಸಂಬಂಧ ಗೋಸಾವಿಯನ್ನು ಬಂಧಿಸಿದ್ದು ನವೆಂಬರ್ 5 ವರೆಗೂ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ತಮಗೆ ಗೋಸಾವಿಯವರು ಮಲೇಷ್ಯಾದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 4 ಲಕ್ಷ ವಂಚನೆ ಮಾಡಿದ್ದಾರೆಂದು ಮೂವರು ವ್ಯಕ್ತಿಗಳಿಂದ  ಪೊಲೀಸರು ಲಷ್ಕರ್ ಪೊಲೀಸ್ ಠಾಣೆಗೆ ದೂರು ಬಂದಿದೆ. 

ಇದಿಷ್ಟೇ ಅಲ್ಲದೇ ಪುಣೆಯ ಹಡಪ್ಸರ್ ಪ್ರದೇಶದಿಂದ ವ್ಯಕ್ತಿಯೋರ್ವ ನೀಡಿದ್ದ ದೂರಿನ ಆಧಾರದಲ್ಲಿ ಶನಿವಾರ ರಾತ್ರಿ ಗೋಸಾವಿ ವಿರುದ್ಧ ಐಪಿಸಿ ಸೆಕ್ಷನ್ 420 (ಮೋಸ) 409 (ಕ್ರಿಮಿನಲ್ ಬ್ರೀಚ್ ಆಫ್ ಟ್ರಸ್ಟ್) ಹಾಗೂ ಶಸ್ತ್ರಾಸ್ತ್ರ ಕಾಯ್ದೆಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT