ದೇಶ

ಯೋಗಿ ಸರ್ಕಾರ ನೀಡಿದ ಭರವಸೆಗಳನ್ನು ಈಡೇರಿಸಿಲ್ಲವೆಂದು ಆರೋಪಿಸಿ ವಿಧಾನಸಭೆಗೆ ರಾಜಿನಾಮೆ ನೀಡಿದ ಎಸ್‌ಪಿ ಶಾಸಕ!

Vishwanath S

ಲಖನೌ: ರಾಜ್ಯದ ಬಿಜೆಪಿ ಸರ್ಕಾರ ಭರವಸೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿ ಅಮೇಥಿಯ ಗೌರಿಗಂಜ್ ಕ್ಷೇತ್ರದ ಸಮಾಜವಾದಿ ಪಕ್ಷದ(ಎಸ್‌ಪಿ) ಶಾಸಕ ರಾಕೇಶ್ ಪ್ರತಾಪ್ ಸಿಂಗ್ ಭಾನುವಾರ ಉತ್ತರ ಪ್ರದೇಶ ವಿಧಾನಸಭೆಗೆ ರಾಜೀನಾಮೆ ನೀಡಿದ್ದಾರೆ.

ರಾಜಿನಾಮೆ ನೀಡಿದ ಬಳಿಕ ಮಾತನಾಡಿದ ಪ್ರತಾಪ್ ಸಿಂಗ್, ಯುಪಿ ವಿಧಾನಸಭೆಯ ಸ್ಪೀಕರ್ ಹೃದಯ ನಾರಾಯಣ ದೀಕ್ಷಿತ್ ಅವರನ್ನು ಭೇಟಿ ಮಾಡಿ ರಾಜೀನಾಮೆ ನೀಡಿದ್ದೇನೆ ಎಂದರು.

ಬಿಜೆಪಿ ಸರ್ಕಾರವು ಸುಳ್ಳುಗಳನ್ನು ಹೇಳುತ್ತಿದೆ. ಕೆಲ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ಯೋಗಿ ಸರ್ಕಾರ ನೀಡಿತ್ತು. ಆದರೆ ಬೇಡಿಕೆಗಳು ಈಡೇರಿಲ್ಲ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸ್ಪೀಕರ್ ದೀಕ್ಷಿತ್ ಅವರು, ಶಾಸಕ ರಾಕೇಶ್ ಪ್ರತಾಪ್ ಸಿಂಗ್ ಇಂದು ನನ್ನನ್ನು ಭೇಟಿಯಾಗಿ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಈ ವಿಷಯವನ್ನು ನಿಯಮಾನುಸಾರ ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು. 

SCROLL FOR NEXT