ರೈತ ಮುಖಂಡ ರಾಕೇಶ್ ಟಿಕಾಯತ್ 
ದೇಶ

ರೈತರ ಟೆಂಟ್ ಗಳನ್ನು ತೆರವುಗೊಳಿಸುವುದರ ವಿರುದ್ಧ ಟಿಕಾಯತ್ ಎಚ್ಚರಿಕೆ

ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯ ಗಡಿ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಟೆಂಟ್ ಗಳನ್ನು ತೆರವುಗೊಳಿಸುವುದರ ವಿರುದ್ಧ ಭಾರತೀಯ ಕಿಸಾನ್ ಒಕ್ಕೂಟ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಎಚ್ಚರಿಕೆ ನೀಡಿದ್ದಾರೆ. 

ನವದೆಹಲಿ: ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯ ಗಡಿ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಟೆಂಟ್ ಗಳನ್ನು ತೆರವುಗೊಳಿಸುವುದರ ವಿರುದ್ಧ ಭಾರತೀಯ ಕಿಸಾನ್ ಒಕ್ಕೂಟ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಎಚ್ಚರಿಕೆ ನೀಡಿದ್ದಾರೆ. 

ಎಎನ್ಐ ನೊಂದಿಗೆ ಮಾತನಾಡಿರುವ ಅವರು, ಸ್ಥಳೀಯ ಆಡಳಿತ ಟೆಂಟ್ ಗಳನ್ನು ತೆರವುಗೊಳಿಸಿದರೆ ರೈತರು ಪೊಲೀಸ್ ಠಾಣೆ ಹಾಗೂ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಗಳಲ್ಲಿಯೇ ಟೆಂಟ್ ಗಳನ್ನು ಹಾಕಿಕೊಳ್ಳುತ್ತಾರೆ ಎಂದು ಟಿಕಾಯತ್ ಎಚ್ಚರಿಸಿದ್ದಾರೆ. 

"ಜೆಸಿಬಿಗಳ ಸಹಾಯದಿಂದ ಟೆಂಟ್ ಗಳನ್ನು ಆಡಳಿತ ತೆರವುಗೊಳಿಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಒಂದು ವೇಳೆ ಅವರು ಅದನ್ನು ಮುಂದುವರೆಸಿದಲ್ಲಿ, ರೈತರು ಪೊಲೀಸ್ ಠಾಣೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಗಳಲ್ಲೇ ಟೆಂಟ್ ಗಳನ್ನು ಹಾಕಿಕೊಳ್ಳಲಿದ್ದಾರೆ" ಎಂದು ಎಚ್ಚರಿಸಿದ್ದಾರೆ. 

ಇದಕ್ಕೂ ಮುನ್ನ ಟ್ವೀಟ್ ಮಾಡಿದ್ದ ಟಿಕಾಯತ್ ಒತ್ತಾಯಪೂರ್ವಕವಾಗಿ ಟೆಂಟ್ ಗಳನ್ನು ತೆರವುಗೊಳಿಸಲು ಯತ್ನಿಸಿದರೆ ದೇಶಾದ್ಯಂತ ರೈತರು ಸರ್ಕಾರಿ ಕಚೇರಿಗಳನ್ನು ಗಲ್ಲಾ ಮಂಡಿಗಳನ್ನಾಗಿ ಪರಿವರ್ತನೆ ಮಾಡಿಕೊಳ್ಳಲಿದ್ದಾರೆ ಎಂದು ಬರೆದಿದ್ದರು.

ದೆಹಲಿ ಪೊಲೀಸ್ ರು ಗುರುವಾರ ರಾತ್ರಿಯಿಂದ ಟಿಕ್ರಿ ಹಾಗೂ ಘಾಜಿಪುರ್ ಗಡಿಗಳಲ್ಲಿ ರೈತರ ಟೆಂಟ್ ಗಳನ್ನು ತೆರವುಗೊಳಿಸುತ್ತಿದ್ದಾರೆ. ಈ ಮಾರ್ಗವನ್ನು 11 ತಿಂಗಳಿನಿಂದ ಮುಚ್ಚಲ್ಪಟ್ಟಿತ್ತು. ಆದರೆ ಪ್ರಯಾಣಿಕರಿಗೆ ಅನಾನುಕೂಲವಾಗುತ್ತಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT