ಸಾಂದರ್ಭಿಕ ಚಿತ್ರ 
ದೇಶ

5-18 ವರ್ಷದ ಮಕ್ಕಳ ಮೇಲೆ 'ಬಯೋಲಾಜಿಕಲ್ ಇ' ಲಸಿಕೆ ಪ್ರಯೋಗಕ್ಕೆ ಡಿಸಿಜಿಐ ಅನುಮತಿ

ಕೆಲವೊಂದು ಷರತ್ತುಗಳೊಂದಿಗೆ 5 ರಿಂದ 18 ವರ್ಷದೊಳಗಿನ ಮಕ್ಕಳ ಮೇಲೆ ಹೈದ್ರಾಬಾದ್ ಮೂಲದ ಬಯೋಲಾಜಿಕಲ್ ಇ ಲಿಮಿಟೆಡ್ ತಯಾರಿಸಿರುವ ಸ್ವದೇಶಿ ಕೋವಿಡ್-19 ಲಸಿಕೆಯ ಎರಡು ಮತ್ತು ಮೂರನೇ ಹಂತದ ಕ್ಲಿನಿಕಲ್ ಪ್ರಯೋಗಕ್ಕೆ ಭಾರತೀಯ ಔಷಧ ನಿಯಂತ್ರಕ ಮಹಾಮಂಡಳಿ (ಡಿಸಿಜಿಐ) ಅನುಮತಿ ನೀಡಿದೆ ಎಂದು ಮೂಲಗಳು ಹೇಳಿವೆ.

ನವದೆಹಲಿ: ಕೆಲವೊಂದು ಷರತ್ತುಗಳೊಂದಿಗೆ 5 ರಿಂದ 18 ವರ್ಷದೊಳಗಿನ ಮಕ್ಕಳ ಮೇಲೆ ಹೈದ್ರಾಬಾದ್ ಮೂಲದ ಬಯೋಲಾಜಿಕಲ್ ಇ ಲಿಮಿಟೆಡ್ ತಯಾರಿಸಿರುವ ಸ್ವದೇಶಿ ಕೋವಿಡ್-19 ಲಸಿಕೆಯ ಎರಡು ಮತ್ತು ಮೂರನೇ ಹಂತದ ಕ್ಲಿನಿಕಲ್ ಪ್ರಯೋಗಕ್ಕೆ ಭಾರತೀಯ ಔಷಧ ನಿಯಂತ್ರಕ ಮಹಾಮಂಡಳಿ (ಡಿಸಿಜಿಐ) ಅನುಮತಿ ನೀಡಿದೆ ಎಂದು ಮೂಲಗಳು ಹೇಳಿವೆ.

ಅನುಮೋದಿತ ಶಿಷ್ಟಾಚಾರದ ಪ್ರಕಾರ ದೇಶದ ಹತ್ತು ಕಡೆಗಳಲ್ಲಿ ಎರಡು ಹಾಗೂ ಮೂರನೇ ಹಂತದ ಪ್ರಯೋಗಗಳು ನಡೆಯಲಿದ್ದು, ಕೋವಿಡ್-19 ಕುರಿತ ವಿಷಯ ತಜ್ಞರ ಸಮಿತಿ ಶಿಫಾರಸ್ಸಿನ ಆಧಾರದ ಮೇಲೆ ಡಿಸಿಜಿಐ ಅನುಮತಿ ನೀಡಿದೆ.

ಈವರೆಗೆ ದೇಶದಲ್ಲಿ 12 ರಿಂದ 18 ವರ್ಷದೊಳಗಿನವರಿಗಾಗಿ ಜಿಡಸ್ ಕ್ಯಾಡಿಲಾ ಅಭಿವೃದ್ಧಿಪಡಿಸಿರುವ ಸೂಜಿ ರಹಿತ ಕೋವಿಡ್-19 ಲಸಿಕೆ ಜಿಕೋವ್- ಡಿ ತುರ್ತು ಬಳಕೆಗೆ ಔಷಧ ನಿಯಂತ್ರಕರಿಂದ ಅನುಮತಿ ಸಿಕ್ಕಿದೆ. 

ಈ ಮಧ್ಯೆ 2 ರಿಂದ 18 ವರ್ಷದೊಳಗಿನವರಿಗಾಗಿ ಭಾರತ್ ಬಯೋಟೆಕ್ ತಯಾರಿಸಿರುವ ಕೋವಾಕ್ಸಿನ್ ಲಸಿಕೆಯ ಎರಡು ಹಾಗೂ ಮೂರನೇ ಹಂತದ ಕ್ಲಿನಿಕಲ್ ಪ್ರಯೋಗ ನಡೆಯುತ್ತಿದೆ. ಕೆಲವೊಂದು ಷರತ್ತುಗಳೊಂದಿಗೆ  2 ರಿಂದ 17 ವರ್ಷದ ಮಕ್ಕಳ ಮೇಲೆ ಕೋವೊವ್ಯಾಕ್ಸ್ ನ ಎರಡು ಹಾಗೂ ಮೂರನೇ ಹಂತದ ಪ್ರಯೋಗ ನಡೆಸಲು ಸೆರಂ ಇನ್ಸಿಟಿಟ್ಯೂಟ್ ಗೆ ಭಾರತೀಯ ಔಷಧ ನಿಯಂತ್ರಕ ಮಂಡಳಿ ಅನುಮತಿ ನೀಡಿದೆ.

ಹದಿಹರೆದವರ ಮೇಲೆ ಬಯೋಲಾಜಿಕಲ್ ಇ ಕಂಪನಿಯ ಕೊರೋನಾ ವಿರೋಧಿ ಲಸಿಕೆ ಕಾರ್ಬೆವಾಕ್ಸ್ ನ ಎರಡು ಹಾಗೂ ಮೂರನೇ ಹಂತದ ಕ್ಲಿನಿಕಲ್ ಪ್ರಯೋಗ ನಡೆಯುತ್ತಿರುವುದಾಗಿ ಮೂಲಗಳು ಈ ಹಿಂದೆ ಹೇಳಿದ್ದವು. ಡಿಸೆಂಬರ್ ಅಂತ್ಯದೊಳಗೆ 30 ಕೋಟಿ ಡೋಸ್ ಕಾರ್ಬೆವಾಕ್ಸ್ ನ್ನು ಕೇಂದ್ರ ಸರ್ಕಾರಕ್ಕೆ ಬಯೋಲಾಜಿಕಲ್ ಇ ಕಂಪನಿ ಪೂರೈಸಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಜೂನ್ ನಲ್ಲಿ ತಿಳಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT