ಪೋಸ್ ನೀಡುತ್ತಿರುವ ಪ್ರಾಂಜಲ್ ಸುರಭಿ 
ದೇಶ

ತಿಪ್ಪೆ ರಾಶಿ ಮೇಲೆ ಫೋಟೊ ಶೂಟ್ ಮಾಡಿಸಿಕೊಂಡ ಮಾಡೆಲ್: ತ್ಯಾಜ್ಯ ವಿಲೇವಾರಿ ಸಮಸ್ಯೆಯತ್ತ ಗಮನ ಸೆಳೆಯುವ ಪ್ರಯತ್ನ 

ರಾಂಚಿಯ ಹೊರವಲಯದಲ್ಲಿ ನಗರದ ಕಸವೆಲ್ಲವನ್ನೂ ಸುರಿಯಲಾಗುತ್ತಿದೆ. ಸುತ್ತಮುತ್ತಲಿನವರು ಅದರಿಂದ ತೊಂದರೆ ಅನುಭವಿಸುತ್ತಿದ್ದಾರೆ. 

ರಾಂಚಿ: ಮಾಡೆಲಿಂಗ್ ಫೋಟೊ ಶೂಟ್ ಮಾಡಿಸಿಕೊಳ್ಳುವವರು ಪಾರ್ಕು, ಐಶಾರಾಮಿ ಮನೆಗಳು, ಸ್ಟುಡಿಯೋ ಮತ್ತಿತರ ಕಡೆಗಳಿಗೆ ತೆರಳುತ್ತಾರೆ. ಆದರೆ ಇಲ್ಲೊಬ್ಬಳು ಹುಡುಗಿ ಸಾವಿರಾರು ಟನ್ ಗಳಷ್ಟು ಪ್ರಮಾಣದ ತಿಪ್ಪೆಯನ್ನು ಸುರಿಯಲಾದ ಜಾಗದಲ್ಲಿ, ತಿಪ್ಪೆ ರಾಶಿ ಮಧ್ಯ ಓಡಾಡುತ್ತಾ ಫೋಟೊ ಶೂಟ್ ಮಾಡಿಸಿಕೊಂಡಿದ್ದಾಳೆ. 

ಆಕೆಯ ಈ ಫೋಟೊ ಶೂಟ್ ಗೆ ಜಗತ್ತಿನೆಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ. ಏಕೆಂದರೆ ಈ ಹುಡುಗಿ ಈ ಜಾಗದಲ್ಲಿ ಫೋಟೊ ಶೂಟ್ ಮಾಡಿಸಿಕೊಂಡಿದ್ದು ಕಸ ವಿಲೇವಾರಿ ಸಮಸ್ಯೆಯತ್ತ ಸರ್ಕಾರದ ಗಮನ ಸೆಳೆಯಲು. ಅಂದ ಹಾಗೆ ಪ್ರಾಂಜಲ್ ಸುರಭಿ ಎನ್ನುವ ಹೆಸರಿನ ಈ ರೂಪದರ್ಶಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ.

ರಾಂಚಿಯ ಹೊರವಲಯದಲ್ಲಿ ನಗರದ ಕಸವೆಲ್ಲವನ್ನೂ ಸುರಿಯಲಾಗುತ್ತಿದೆ. ಸುತ್ತಮುತ್ತಲಿನವರು ಅದರಿಂದ ತೊಂದರೆ ಅನುಭವಿಸುತ್ತಿದ್ದಾರೆ. 

ಅಂತಾರಾಷ್ಟ್ರೀಯ ಫೋಟೊ ಸ್ಪರ್ಧೆಯಲ್ಲಿ ಆಯ್ಕೆಯಾಗಿರುವ 119 ದೇಶಗಳ 7000 ಫೋಟೋಗಳಲ್ಲಿ ಸುರಭಿಯ ಫೋಟೋ ಕೂಡಾ ಸೇರಿದೆ ಎನ್ನುವುದು ಸಂತಸದ ಸಂಗತಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT