ಸುಪ್ರೀಂ ಕೋರ್ಟ್ 
ದೇಶ

ಅಂತಿಮವಾಗಿ ಈ ದೇಶಕ್ಕೆ ಕೆಟ್ಟ ಹೆಸರು ಬರುತ್ತದೆ: ನಕಲಿ, ಕೋಮು ಸುದ್ದಿಗಳ ಬಗ್ಗೆ ಸುಪ್ರೀಂ ಕಳವಳ

ಸಾಮಾಜಿಕ ಜಾಲತಾಣಗಳು, ವೆಬ್ ಪೋರ್ಟಲ್ ಗಳಲ್ಲಿ ಕೋಮು ಧ್ವನಿಯ ಸುದ್ದಿಗಳು, ನಕಲಿ ಸುದ್ದಿಗಳು ಹೆಚ್ಚುತ್ತಿರುವುದರ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಆತಂಕ ವ್ಯಕ್ತಪಡಿಸಿದೆ. 

ನವದೆಹಲಿ: ಸಾಮಾಜಿಕ ಜಾಲತಾಣಗಳು, ವೆಬ್ ಪೋರ್ಟಲ್ ಗಳಲ್ಲಿ ಕೋಮು ಧ್ವನಿಯ ಸುದ್ದಿಗಳು, ನಕಲಿ ಸುದ್ದಿಗಳು ಹೆಚ್ಚುತ್ತಿರುವುದರ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಆತಂಕ ವ್ಯಕ್ತಪಡಿಸಿದೆ. 

"ಕೆಲವು ಚಾನಲ್ ಗಳಲ್ಲಿ ತೋರಿಸಲಾಗುತ್ತಿರುವ ಸುದ್ದಿಗಳೂ ಸಹ ಕೋಮು ಧ್ವನಿಯನ್ನು ಹೊಂದಿರುತ್ತವೆ ಇದು ದೇಶಕ್ಕೆ ಕೆಟ್ಟ ಹೆಸರು ತರುವ ಸಾಧ್ಯತೆ ಇದೆ" ಎಂದು ಕೋರ್ಟ್ ಎಚ್ಚರಿಸಿದೆ.

ಸಿಜೆಐ ನ್ಯಾ. ಎನ್ ವಿ ರಮಣ ಅವರಿದ್ದ ಪೀಠ ಜಮೀಯತ್ ಉಲೆಮಾ-ಐ-ಹಿಂದ್ ಹಾಗೂ ಇನ್ನಿತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದಾಗ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಮರ್ಕಜ್ ನಿಜಾಮುದ್ದೀನ್ ನ ಧಾರ್ಮಿಕ ಸಮ್ಮೇಳನದ ಬಗ್ಗೆ ನಕಲಿ ಸುದ್ದಿಗಳನ್ನು ಪ್ರಸಾರ ಮಾಡುವುದಕ್ಕೆ ತಡೆ ನೀಡಲು ಹಾಗೂ ನಕಲಿ ಸುದ್ದಿಗಳ ಪ್ರಸಾರ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.

"ಖಾಸಗಿ ಸುದ್ದಿ ಚಾನಲ್ ಗಳಲ್ಲಿ ಪ್ರಸಾರವಾಗುವ ಸುದ್ದಿಗಳು ಕೋಮು ಬಣ್ಣವನ್ನು ಹೊಂದಿರುತ್ತವೆ, ಕೊನೆಗೆ ಈ ದೇಶ ಕೆಟ್ಟ ಹೆಸರು ಪಡೆಯುವಂತಾಗುತ್ತದೆ. ಈ ಸುದ್ದಿ ವಾಹಿನಿಗಳನ್ನು ನಿಯಂತ್ರಿಸಲು ಯಾವುದಾದರೂ ಪ್ರಯತ್ನ ನಡೆದಿದಾ? ಎಂದು ಕೋರ್ಟ್ ಪ್ರಶ್ನಿಸಿದೆ. "ಸಾಮಾಜಿಕ ಜಾಲತಾಣ ಪ್ರಬಲ ಧ್ವನಿಗಳನ್ನು ಮಾತ್ರ ಆಲಿಸುತ್ತವೆ. ನ್ಯಾಯಾಧೀಶರ ವಿರುದ್ಧ, ಸಂಸ್ಥೆಯ ವಿರುದ್ಧ ಯಾವುದೇ ಹೊಣೆಗಾರಿಕೆ ಇಲ್ಲದೇ ಹಲವಾರು ವಿಷಯಗಳನ್ನು ಬರೆಯಲಾಗುತ್ತದೆ" ಎಂದು ನ್ಯಾ. ಸೂರ್ಯಕಾಂತ್ ಹಾಗೂ ಎಎಸ್ ಬೋಪಣ್ಣ ಅವರಿದ್ದ ಪೀಠ ಹೇಳಿದೆ.

ನಕಲಿ ಸುದ್ದಿಗಳ ಮೇಲೆ, ವೆಬ್ ಪೋರ್ಟಲ್ ಗಳಲ್ಲಿ ಅಪಪ್ರಚಾರದ ಮೇಲೆ, ಯೂಟ್ಯೂಬ್ ಚಾನಲ್ ಗಳ ಮೇಲೆ ನಿಯಂತ್ರಣವಿಲ್ಲ. ಯೂಟ್ಯೂಬ್ ಗೆ ಹೋದಲ್ಲಿ ಅಲ್ಲಿ ನಕಲಿ ಸುದ್ದಿಗಳು ಮುಕ್ತವಾಗಿ ಹಂಚಿಕೆಯಾಗುತ್ತಿರುತ್ತದೆ, ಯೂಟ್ಯೂಬ್ ನಲ್ಲಿ ಯಾರು ಬೇಕಾದರೂ ಚಾನಲ್ ಸೃಷ್ಟಿಸಬಹುದು ಎಂದು ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT