ಸಾಂದರ್ಭಿಕ ಚಿತ್ರ 
ದೇಶ

ಬಂಗಾಳ ಚುನಾವಣೋತ್ತರ ಹಿಂಸಾಚಾರ: ಎಸ್ಐಟಿಗೆ ಸಹಾಯ ಮಾಡಲು 10 ಐಪಿಎಸ್ ಅಧಿಕಾರಿಗಳ ನೇಮಕ

ರಾಜ್ಯದಲ್ಲಿ ಚುನಾವಣೋತ್ತರ ಹಿಂಸಾಚಾರ ಪ್ರಕರಣಗಳ ತನಿಖೆಗಾಗಿ ಕಲ್ಕತ್ತಾ ಹೈಕೋರ್ಟ್ ರಚಿಸಿದ ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ಸಹಾಯ ಮಾಡಲು ಪಶ್ಚಿಮ ಬಂಗಾಳ ಸರ್ಕಾರ ಹತ್ತು ಐಪಿಎಸ್ ಅಧಿಕಾರಿಗಳನ್ನು ನೇಮಿಸಿದೆ..

ಕೋಲ್ಕತ್ತಾ: ರಾಜ್ಯದಲ್ಲಿ ಚುನಾವಣೋತ್ತರ ಹಿಂಸಾಚಾರ ಪ್ರಕರಣಗಳ ತನಿಖೆಗಾಗಿ ಕಲ್ಕತ್ತಾ ಹೈಕೋರ್ಟ್ ರಚಿಸಿದ ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ಸಹಾಯ ಮಾಡಲು ಪಶ್ಚಿಮ ಬಂಗಾಳ ಸರ್ಕಾರ ಹತ್ತು ಐಪಿಎಸ್ ಅಧಿಕಾರಿಗಳನ್ನು ನೇಮಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಅಧಿಕಾರಿಗಳನ್ನು ರಾಜ್ಯದ ಉತ್ತರ, ಪಶ್ಚಿಮ ಮತ್ತು ದಕ್ಷಿಣ ವಲಯಗಳಿಗೆ ಹಾಗೂ ಕೋಲ್ಕತಾ ಪೊಲೀಸ್ ಪ್ರದೇಶಗಳಿಗೆ ನಿಯೋಜಿಸಲಾಗಿದೆ ಎಂದು ಅವರು ಹೇಳಿದರು.

"ಐಪಿಎಸ್ ಅಧಿಕಾರಿಗಳ ಸೇವೆಯನ್ನು ಅವರ ಸಾಮಾನ್ಯ ಕರ್ತವ್ಯಗಳ ಜೊತೆಗೆ ಗೌರವಾನ್ವಿತ ಹೈಕೋರ್ಟ್ ರಚಿಸಿದ ಎಸ್ಐಟಿಗೆ ಸಹಾಯ ಮಾಡಲು ನಿಯೋಜಿಸಲಾಗಿದೆ" ಎಂದು ರಾಜ್ಯ ಗೃಹ ಇಲಾಖೆಯು ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.

ಆಗಸ್ಟ್ 19 ರಂದು ಕಲ್ಕತ್ತಾ ಹೈಕೋರ್ಟ್‌ನ ಐವರು ನ್ಯಾಯಾಧೀಶರ ಪೀಠ, ಚುನಾವಣೆಯ ನಂತರದ ಹಿಂಸಾಚಾರದ ಘಟನೆಗಳ ಬಗ್ಗೆ ತನಿಖೆ ನಡೆಸಲು ಐಪಿಎಸ್ ಅಧಿಕಾರಿಗಳಾದ ಸೌಮೆನ್ ಮಿತ್ರಾ, ಸುಮನ್ ಬಾಲಾ ಸಾಹೂ ಮತ್ತು ರಣಬೀರ್ ಕುಮಾರ್ ಅವರನ್ನು ಒಳಗೊಂಡ ವಿಶೇಷ ತನಿಖಾ ತಂಡ ರಚನೆ ಮಾಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT